ಶಿವಮೊಗ್ಗ ಲೈವ್.ಕಾಂ | SAGARA | 15 ಜನವರಿ 2020

ತಾಳಗುಪ್ಪಕ್ಕೆ ಮಂಜೂರಾಗಿರುವ ರೈಲ್ವೆ ಟರ್ಮಿನಲ್ ಅನ್ನು ಏಕಾಏಕಿ ಶಿವಮೊಗ್ಗದ ಕೋಟೆಗಂಗೂರಿಗೆ ಸ್ಥಳಾಂತರಿಸಿರುವ ಸರ್ಕಾರದ ಕ್ರಮ ಖಂಡಿಸಿ ತಾಲೂಕು ಕಚೇರಿ ಆವರಣದಲ್ಲಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಉಪವಾಸ ಸತ್ಯಾಗ್ರಹ ನಡೆಸಿದರು.
ಸಾಹಿತಿ ಡಾ. ನಾ.ಡಿಸೋಜ ಮಾತನಾಡಿ, ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ಕೋಟಿಗಂಗೂರಿಗೆ ಸ್ಥಳಾಂತರಗೊಳ್ಳಲು ಕಾರಣ ಏನು? ಈ ಬಗ್ಗೆ ಸಾರ್ವಜನಿಕರೆದುರು ಸಾಗರ ಹಾಗೂ ಸೊರಬ ಶಾಸಕರು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.
ಯೋಜನೆಯೊಂದನ್ನು ಮಂಜೂರು ಮಾಡಿ ಅದನ್ನು ಕಿತ್ತುಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದ್ರೋಹ. ಯಾವುದೇ ಕಾರಣಕ್ಕೂ ಟರ್ಮಿನಲ್ ಕೋಟಿಗಂದೂರಿಗೆ ಸ್ಥಳಾಂತರಿಸಬಾರದು. ತಾಳಗುಪ್ಪದಲ್ಲಿಯೇ ಸ್ಥಾಪಿಸುವಂತೆ ಎರಡೂ ಕ್ಷೇತ್ರದ ಶಾಸಕರು ಸಿಎಂ ಹಾಗೂ ಸಂಸದರ ಮೇಲೆ ಒತ್ತಡ ತರಬೇಕು ಎಂದು ಸಾಹಿತಿ ನಾ.ಡಿಸೋಜ ಅವರು ಒತ್ತಾಯಿಸಿದರು.
ಎಚ್.ಬಿ.ರಾಘವೇಂದ್ರ ಮಾತನಾಡಿ, ಶಾಸಕರಾದ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಮತ ನೀಡಿದ ಜನರಿಗೆ ಅನ್ಯಾಯ ಮಾಡುತ್ತಿರುವುದು ದುರಾದೃಷ್ಟಕರ. ಎರಡೂ ಕ್ಷೇತ್ರದ ಮತದಾರರು ನಿಮಗೆ ಮತ ನೀಡದಿದ್ದರೆ ನೀವು ಹೇಗೆ ಶಾಸಕರಾಗುತ್ತಿದ್ದೀರಿ? ಜನರ ಋಣ ತೀರಿಸುವ ಹೊಣೆ ನಿಮ್ಮ ಮೇಲಿದೆ ಎಂಬುದನ್ನು ಮರೆಯಬೇಡಿ ಎಂದರು.
ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತಿ.ನ.ಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ರವಿ ಕುಗ್ವೆ, ಲೇಖಕ ವಿಲಿಯಂ, ಸುಧಾಕರ ಕುಗ್ವೆ, ಶಿವಾನಂದ ಕುಗ್ವೆ, ವಾಮದೇವ ಗೌಡ, ಕನ್ನಪ್ಪ ಬೆಳಲಮಕ್ಕಿ, ಆ.ರಾ.ಶ್ರೀನಿವಾಸ್, ಕನ್ನಪ್ಪ ಮುಳಕೇರಿ, ತುಕಾರಾಮ್ ಸೇರಿದಂತೆ ಹಲವರಿದ್ದರು.
RECENT NEWS | CLICK HERE
- Cops Open Fire on Mutt Robbery Suspect in Shikaripura
- BREAKING NEWS – ತೀರ್ಥಹಳ್ಳಿಯ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಕಾಲಿಗೆ ಶಿಕಾರಿಪುರದಲ್ಲಿ ಗುಂಡೇಟು
- ಮಂಜುನಾಥ ಗೌಡ ಅರೆಸ್ಟ್, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್
- ಅಡಿಕೆ ಧಾರಣೆ | 9 ಏಪ್ರಿಲ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?
- ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್ ಇಂಜಿನಿಯರ್, ಏನಿದು ಕೇಸ್?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200