ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021
ಸಾಗರ ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ವಿಪ್ರ ವೈದಿಕ ಪರಿಷತ್ ಮತ್ತು ತ್ರಿಮತಸ್ಥ ಬ್ರಾಹ್ಮಣ ಅರ್ಚಕರು, ಪುರೋಹಿತರ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪರಿಷತ್ ಸದಸ್ಯರು, 45 ದಿನದಿಂದ ದೇವಸ್ಥಾನಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈಗ ರಾಜ್ಯದಲ್ಲಿ ಕರೋನ ಸೋಂಕು ಇಳಿಮುಖವಾಗಿದೆ. ದೇವಸ್ಥಾನ ಬಾಗಿಲು ತೆಗೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಮದ್ಯದ ಅಂಗಡಿ ತೆಗೆಯಲಷ್ಟೆ ಅವಕಾಶವಾ?
ಇದೆ ವೇಳೆ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ, ರಾಜ್ಯದಲ್ಲಿ ಬೆಳಗ್ಗೆ 6 ಗಂಟೆಗೆ ಮದ್ಯದಂಗಡಿಗಳ ಬಾಗಿಲು ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಮನಃ ಶಾಂತಿ ನೀಡಿ, ಜನರಲ್ಲಿ ಸ್ಥೈರ್ಯ ತುಂಬುವ ದೇವಸ್ಥಾನಗಳ ಬಾಗಿಲು ತೆಗೆಯಲು ಅವಕಾಶ ನೀಡಿಲ್ಲ. ಇನ್ನಾದರೂ ಸರ್ಕಾರ ಇತ್ತ ಗಮನ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ನವೀನ್ ಜೋಯ್ಸ್, ರಾಘವೇಂದ್ರ ಭಟ್, ಅನಿಲ್ ಹೊಳ್ಳ, ಗಿರೀಶ್ ಭಟ್, ಪ್ರಶಾಂತ್ ಭಟ್, ಗಜಾನನ ಜೋಯ್ಸ್, ಮಿಥುನ್, ವಿನಯ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















