ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAINFALL NEWS, 20 AUGUST 2024 : ಮಘ ಮಳೆ ಅಬ್ಬರಕ್ಕೆ (Rain Effect)  ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಸೋಮವಾರ ಸುರಿದ ಮಳೆಗೆ ಕೆರೆ ಕೋಡಿ ಬಿದ್ದಿವೆ. ಗದ್ದೆ, ತೋಟಗಳು ಜಲಾವೃತವಾಗಿ ನಷ್ಟ ಉಂಟಾಗಿದೆ.

ಎಲ್ಲೆಲ್ಲಿ ಏನೇನು ಹಾನಿಯಾಗಿದೆ?

[su_note note_color=”#EBEDEF ” text_color=”#000000″]

ಕೋಡಿ ಬಿದ್ದ ಅಬ್ಬಲಗೆರೆ ಕೆರೆ

ಶಿವಮೊಗ್ಗ ಲೈವ್.ಕಾಂ : ಭಾರಿ ಮಳೆಗೆ ಶಿವಮೊಗ್ಗದ ಅಬ್ಬಲಗೆರೆ ಕೆರೆ ಕೋಡಿ ಬಿದ್ದು, ಜಲಪಾತ ಸೃಷ್ಟಿಯಾಗಿದೆ. ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಬಸವನಗಂಗೂರು ಸರ್ಕಾರಿ ಶಾಲೆ ಜಲಾವೃತವಾಗಿತ್ತು. ನೀರು ನುಗ್ಗುತ್ತಿದ್ದಂತೆ ಶಿಕ್ಷಕರು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದರು. ಕೊಠಡಿಗೆ ನುಗ್ಗಿದ್ದ ನೀರನ್ನು ಹೊರ ಹಾಕಲು ಶಿಕ್ಷಕರು ಹರಸಾಹಸ ಮಾಡಬೇಕಾಯಿತು.

abbalagere-lake-and-basavanaganguru-school.

[/su_note]

[su_note note_color=”#fdf2e9″ text_color=”#000000″]

ತೂಬು ಒಡೆದು ಬೊಮ್ಮನಕಟ್ಟೆಗೆ ನೀರು

ಶಿವಮೊಗ್ಗ ಲೈವ್.ಕಾಂ : ಬೊಮ್ಮನಕಟ್ಟೆ ದೇಗುಲದ ಸಮೀಪ ಕೆರೆಯ ತೂಬು ಮತ್ತು ಪೈಪ್‌ ಒಡೆದು ಹಾನಿ ಉಂಟಾಗಿದೆ ಎನ್ನಲಾಗಿದೆ. ಈಗಾಗಲೇ ಕೆರೆ ಭರ್ತಿಯಾಗಿತ್ತು. ಸೋಮವಾರ ಸುರಿದ ಮಳೆಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ತೂಬು ಮತ್ತು ಪೈಪ್‌ ಒಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈಚೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್‌ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಸ್ಥಳೀಯರಿಗೆ ಧೈರ್ಯ ಹೇಳಿದರು.

k e kantesh

[/su_note]

[su_note note_color=”#EBEDEF ” text_color=”#000000″]

ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿ

ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗ ತಾಲೂಕಿನ ಆಯನೂರು, ಕಾಚಿಕೊಪ್ಪ ಸೇರಿದಂತೆ ವಿವಿಧೆ ಜೋರು ಮಳೆಯಾಗಿದೆ. ಈ ಭಾಗದಲ್ಲಿ ವಿವಿಧೆಡೆ ಜಮೀನಿಗೆ ನೀರು ನುಗ್ಗಿದೆ. ಭತ್ತ, ಶುಂಠಿ ಬೆಳೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.[/su_note]

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

[su_note note_color=”#fdf2e9″ text_color=”#000000″]

ಆನಂದಪುರ ಸುತ್ತಮುತ್ತ ಮಳೆ ಅಬ್ಬರ

Anandapura

ಶಿವಮೊಗ್ಗ ಲೈವ್.ಕಾಂ : ಆನಂದಪುರ ಸುತ್ತಮುತ್ತ ಭಾರಿ ಮಳೆಗೆ ಬೆಳೆ ಹಾನಿ ಉಂಟಾಗಿದೆ. ಸಿದ್ದೇಶ್ವರ ಕಾಲೋನಿ, ಮುಂಬಾಳುವಿನಲ್ಲಿ ಭಾರಿ ಮಳೆಯಾಗಿದೆ. ಚರಂಡಿಗಳು ಉಕ್ಕಿ ಹರಿದು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು. ಮುಂಬಾಳುವಿನಲ್ಲಿ ಗದ್ದೆಗೆ ನೀರು ನುಗ್ಗಿದೆ. ಈಚೆಗೆ ನಾಟಿ ಮಾಡಿದ್ದ ಭತ್ತದ ಸಸಿ ಕೊಚ್ಚಿ ಹೋಗಿದೆ. ಹಲವು ಮನೆಗಳಿಗು ನೀರು ನುಗ್ಗಿದ್ದು ವಸ್ತುಗಳು ಹಾನಿಯಾಗಿವೆ.[/su_note]

ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಬೆಸ್ಟ್‌ ಉದಾಹರಣೆಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 20, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment