ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

RAINFALL NEWS, 20 AUGUST 2024 : ಮಘ ಮಳೆ ಅಬ್ಬರಕ್ಕೆ (Rain Effect)  ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಸೋಮವಾರ ಸುರಿದ ಮಳೆಗೆ ಕೆರೆ ಕೋಡಿ ಬಿದ್ದಿವೆ. ಗದ್ದೆ, ತೋಟಗಳು ಜಲಾವೃತವಾಗಿ ನಷ್ಟ ಉಂಟಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಏನೇನು ಹಾನಿಯಾಗಿದೆ?

ಕೋಡಿ ಬಿದ್ದ ಅಬ್ಬಲಗೆರೆ ಕೆರೆ

ಶಿವಮೊಗ್ಗ ಲೈವ್.ಕಾಂ : ಭಾರಿ ಮಳೆಗೆ ಶಿವಮೊಗ್ಗದ ಅಬ್ಬಲಗೆರೆ ಕೆರೆ ಕೋಡಿ ಬಿದ್ದು, ಜಲಪಾತ ಸೃಷ್ಟಿಯಾಗಿದೆ. ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಬಸವನಗಂಗೂರು ಸರ್ಕಾರಿ ಶಾಲೆ ಜಲಾವೃತವಾಗಿತ್ತು. ನೀರು ನುಗ್ಗುತ್ತಿದ್ದಂತೆ ಶಿಕ್ಷಕರು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದರು. ಕೊಠಡಿಗೆ ನುಗ್ಗಿದ್ದ ನೀರನ್ನು ಹೊರ ಹಾಕಲು ಶಿಕ್ಷಕರು ಹರಸಾಹಸ ಮಾಡಬೇಕಾಯಿತು.

abbalagere-lake-and-basavanaganguru-school.

ತೂಬು ಒಡೆದು ಬೊಮ್ಮನಕಟ್ಟೆಗೆ ನೀರು

ಶಿವಮೊಗ್ಗ ಲೈವ್.ಕಾಂ : ಬೊಮ್ಮನಕಟ್ಟೆ ದೇಗುಲದ ಸಮೀಪ ಕೆರೆಯ ತೂಬು ಮತ್ತು ಪೈಪ್‌ ಒಡೆದು ಹಾನಿ ಉಂಟಾಗಿದೆ ಎನ್ನಲಾಗಿದೆ. ಈಗಾಗಲೇ ಕೆರೆ ಭರ್ತಿಯಾಗಿತ್ತು. ಸೋಮವಾರ ಸುರಿದ ಮಳೆಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ತೂಬು ಮತ್ತು ಪೈಪ್‌ ಒಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈಚೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್‌ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಸ್ಥಳೀಯರಿಗೆ ಧೈರ್ಯ ಹೇಳಿದರು.

k e kantesh

ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿ

ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗ ತಾಲೂಕಿನ ಆಯನೂರು, ಕಾಚಿಕೊಪ್ಪ ಸೇರಿದಂತೆ ವಿವಿಧೆ ಜೋರು ಮಳೆಯಾಗಿದೆ. ಈ ಭಾಗದಲ್ಲಿ ವಿವಿಧೆಡೆ ಜಮೀನಿಗೆ ನೀರು ನುಗ್ಗಿದೆ. ಭತ್ತ, ಶುಂಠಿ ಬೆಳೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

ಆನಂದಪುರ ಸುತ್ತಮುತ್ತ ಮಳೆ ಅಬ್ಬರ

Anandapura

ಶಿವಮೊಗ್ಗ ಲೈವ್.ಕಾಂ : ಆನಂದಪುರ ಸುತ್ತಮುತ್ತ ಭಾರಿ ಮಳೆಗೆ ಬೆಳೆ ಹಾನಿ ಉಂಟಾಗಿದೆ. ಸಿದ್ದೇಶ್ವರ ಕಾಲೋನಿ, ಮುಂಬಾಳುವಿನಲ್ಲಿ ಭಾರಿ ಮಳೆಯಾಗಿದೆ. ಚರಂಡಿಗಳು ಉಕ್ಕಿ ಹರಿದು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿತ್ತು. ಮುಂಬಾಳುವಿನಲ್ಲಿ ಗದ್ದೆಗೆ ನೀರು ನುಗ್ಗಿದೆ. ಈಚೆಗೆ ನಾಟಿ ಮಾಡಿದ್ದ ಭತ್ತದ ಸಸಿ ಕೊಚ್ಚಿ ಹೋಗಿದೆ. ಹಲವು ಮನೆಗಳಿಗು ನೀರು ನುಗ್ಗಿದ್ದು ವಸ್ತುಗಳು ಹಾನಿಯಾಗಿವೆ.

ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಬೆಸ್ಟ್‌ ಉದಾಹರಣೆಗಳು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment