ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಹೃದಯ ಬಳಗ, ತಾಲೂಕು ಇತಿಹಾಸ ವೇದಿಕೆಯ ಆಶ್ರಯದಲ್ಲಿ ಜನವರಿ 3 ಮತ್ತು 4ರಂದು ಗಾಂಧಿ ಮೈದಾನದಲ್ಲಿ ರಜತ ಸಾಗರೋತ್ಸವ (Sagarotsava) 2026 ಕಾರ್ಯಕ್ರಮ ನಡೆಯಲಿದೆ.
ಜನವರಿ 3ರಂದು ಸಂಜೆ 5ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆನಂದಪುರದ ಮುರುಘಾ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಕೆಳದಿ ರಾಜಗುರು ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸಹೃದಯ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
ಶಾರದಾಂಬಾ ಕಲಾ ಕೇಂದ್ರದಿಂದ ಭರತನಾಟ್ಯ, ದೈವಜ್ಞ ಚಿಣ್ಣರಿಂದ ಚಂಡೆ ವಾದನ, ಸಿಯಾನ್ ಪಂಚಪ್ಪ ಮತ್ತು ತಂಡದವರಿಂದ ಕರಾಟೆ ಪ್ರದರ್ಶನ, ಮನು ಹಂದಾಡಿ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ » ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್ ಚೆಕ್ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ಜನವರಿ 4ರಂದು ಸಂಜೆ 5ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು, ಡಾ.ರಾಜನಂದಿನಿ ಕಾಗೋಡು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಾಲತೇಶ್ ಜೋಗಿ ತಂಡದಿಂದ ಗೀಗೀ ಪದ, ವಿದುಷಿ ಮೇಘನಾ ರಾವ್, ಆದ್ಯ ರಿಪ್ಪನ್ಪೇಟೆ ಅವರಿಂದ ಭರತನಾಟ್ಯ, ಪರಿಣಿತಿ ಕಲಾ ಕೇಂದ್ರದಿಂದ ಜಾನಪದ ನೃತ್ಯ, ಕರ್ನಾಟಕ ಜಾನಪದ ಪರಿಷತ್ತಿನಿಂದ ಗಾಯನ, ಮಿಮಿಕ್ರಿ ದಯಾನಂದ್ ಅವರಿಂದ ನಗೆಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ. ಆಹಾರ ಮೇಳವನ್ನು ಸಂಘಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






