ಐಪಿಎಲ್ ಹವಾ | ಸಾಗರದಲ್ಲಿ RCB ಕಾರ್, ವಿಡಿಯೋ ವೈರಲ್, ಹೇಗಿದೆ ಕಾರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 ಮಾರ್ಚ್ 2022

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ (RCB) ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು RCBಗಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ.

Shimoga Nanjappa Hospital

ಸಾಗರದ ಸದ್ಗುರು ಸಂತೋಷ್ ಅವರು RCB ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಸೆಲ್ಫಿ, ಫೋಟೊಗಾಗಿ ಜನರು ಮುಗಿಬಿದ್ದಿದ್ದಾರೆ.

1980ರ ಮಾಡೆಲ್ ಕಾರು

ಸದ್ಗುರು ಹೊಟೇಲ್ ಸಂತೋಷ್ ಅವರು 1980ರ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ‘ಹಳೆಯದನ್ನೆಲ್ಲ ಉಳಿಸಿಕೊಂಡು ಹೋಗಬೇಕು. ಆ ಕಾರಣಕ್ಕೆ ಹಳೆಯ ಫಿಯಟ್ ಖರೀದಿಸಿದ್ದೇನೆ. ನಾನು RCB ಅಭಿಮಾನಿ. ಆದ್ದರಿಂದ ಕಾರಿಗೆ RCB ಸ್ಟಿಕರ್ ಮಾಡಿಸಿದ್ದೇನೆ’ ಅನ್ನುತ್ತಾರೆ ಸದ್ಗುರು ಸಂತೋಷ್.

‘ಈ ಸಲ ಕಪ್ ನಮ್ದೆ’

ಕಾರಿನ ಮುಂಭಾಗದ ಬಾನೆಟ್ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆಯಿಸಿದ್ದಾರೆ. ಬಾನೆಟ್’ನ ಮುಂಭಾಗ ನಟ ಡಾ.ರಾಜಕುಮಾರ್ ಅವರ ಭಾವಚಿತ್ರದ ಸ್ಟಿಕರಿಂಗ್ ಮಾಡಿಸಿದ್ದಾರೆ. ‘ಕಾರಿನ ಮೇಲೆ ನಟರಾದ ಶಂಕರನಾಗ್, ಡಾ.ವಿಷ್ಣುವರ್ಧನ್, ಡಾ.ಪುನೀತ್ ರಾಜಕುಮಾರ್ ಅವರ ಫೋಟೊಗಳಿವೆ. ಮುಂಭಾಗದಲ್ಲಿ ಡಾ.ರಾಜಕುಮಾರ್ ಅವರ ದೊಡ್ಡ ಫೋಟೊ ಇದೆ’ ಅನ್ನುತ್ತಾರೆ ಸದ್ಗುರು ಸಂತೋಷ್.

ಪೆಟ್ರೋಲ್ ಟ್ಯಾಂಕ್ ಮೇಲೆ ಅಚ್ಚೇ ದಿನ್

ಇವೆಲ್ಲದರ ನಡುವೆ ಪೆಟ್ರೋಲ್ ಟ್ಯಾಂಕ್ ಮೇಲೆ ಬರೆಯಿಸಿರುವ ಪದ ಹಲವರ ಗಮನ ಸೆಳೆಯುತ್ತಿದೆ. ಅಚ್ಚೇ ದಿನ್ ಎಂದು ಸ್ಟಿಕರ್ ಹಾಕಿಸಿದ್ದಾರೆ. ‘ವಿಡಂಬನಾತ್ಮಕವಾಗಿ ಅಚ್ಚೇ ದಿನ್ ಎಂದು ಬರೆಯಿಸಿದ್ದೇನೆ. ಈ ಭಾರಿ ನಮ್ಮ ತಂಡ ಕಪ್ ಗೆಲ್ಲಬಹುದು ಎಂಬ ಕಾರಣಕ್ಕೆ ಅಚ್ಚೇ ದಿನ್ ಎಂದುಕೊಳ್ಳಬಹುದು. ಮತ್ತೊಂದು ಕಡೆ ಪೆಟ್ರೋಲ್ ರೇಟ್ ದುಬಾರಿಯಾಗಿರುವುದು ಅಚ್ಚೇ ದಿನ್ ಎಂದು ತಿಳಿದು ಕೊಳ್ಳಬಹುದು’ ಅನ್ನುತ್ತಾರೆ ಸದ್ಗುರು ಸಂತೋಷ್.

ಕಾರಿನ ವಿಡಿಯೋ ವರೈಲ್

ಇನ್ನು, RCB ಮೇಲಿನ ಅಭಿಮಾನ, ಕಾರಿಗೆ ಹೊಸ ಲುಕ್ ಕೊಟ್ಟಿರುವುದನ್ನು ಸದ್ಗುರು ಸಂತೋಷ್ ಅವರು ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. RCB ತಂಡದ ಪರವಾಗಿ ಇರುವ ಅಭಿಮಾನಿಗಳಿಗೆ ಜೋಶ್ ನೀಡಿದೆ.

 ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕಳೆದ ಐಪಿಎಲ್ ಹೊತ್ತಿಗೆ ತಮ್ಮ ಸ್ಕೂಟರ್’ಗೆ ಐಪಿಎಲ್ ಸ್ಟಿಕರ್ ಮಾಡಿಸಿ ಸಂತೋಷ್ ಅವರು ಸುದ್ದಿಯಾಗಿದ್ದರು. ಈಗಲೂ ಆ ಸ್ಕೂಟರ್ ಹಲವರ ಗಮನ ಸೆಳೆಯುತ್ತಿದೆ. ಈ ಭಾರಿ ಫಿಯಟ್ ಕಾರಿಗೆ ಐಪಿಎಲ್ ಲುಕ್ ಕೊಟ್ಟಿದ್ದಾರೆ. ಇದು ಕೂಡ ಈಗ ಫೋಟೊ, ಸೆಲ್ಫಿ ಪ್ರಿಯರು, RCB ಅಭಿಮಾನಿಗಳನ್ನು ಸೆಳೆಯುತ್ತಿದೆ.

ಇದನ್ನೂ ಓದಿ |  ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment