SHIVAMOGGA LIVE NEWS | 25 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ (RCB) ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು RCBಗಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ.
ಸಾಗರದ ಸದ್ಗುರು ಸಂತೋಷ್ ಅವರು RCB ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಸೆಲ್ಫಿ, ಫೋಟೊಗಾಗಿ ಜನರು ಮುಗಿಬಿದ್ದಿದ್ದಾರೆ.
1980ರ ಮಾಡೆಲ್ ಕಾರು
ಸದ್ಗುರು ಹೊಟೇಲ್ ಸಂತೋಷ್ ಅವರು 1980ರ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ‘ಹಳೆಯದನ್ನೆಲ್ಲ ಉಳಿಸಿಕೊಂಡು ಹೋಗಬೇಕು. ಆ ಕಾರಣಕ್ಕೆ ಹಳೆಯ ಫಿಯಟ್ ಖರೀದಿಸಿದ್ದೇನೆ. ನಾನು RCB ಅಭಿಮಾನಿ. ಆದ್ದರಿಂದ ಕಾರಿಗೆ RCB ಸ್ಟಿಕರ್ ಮಾಡಿಸಿದ್ದೇನೆ’ ಅನ್ನುತ್ತಾರೆ ಸದ್ಗುರು ಸಂತೋಷ್.
‘ಈ ಸಲ ಕಪ್ ನಮ್ದೆ’
ಕಾರಿನ ಮುಂಭಾಗದ ಬಾನೆಟ್ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆಯಿಸಿದ್ದಾರೆ. ಬಾನೆಟ್’ನ ಮುಂಭಾಗ ನಟ ಡಾ.ರಾಜಕುಮಾರ್ ಅವರ ಭಾವಚಿತ್ರದ ಸ್ಟಿಕರಿಂಗ್ ಮಾಡಿಸಿದ್ದಾರೆ. ‘ಕಾರಿನ ಮೇಲೆ ನಟರಾದ ಶಂಕರನಾಗ್, ಡಾ.ವಿಷ್ಣುವರ್ಧನ್, ಡಾ.ಪುನೀತ್ ರಾಜಕುಮಾರ್ ಅವರ ಫೋಟೊಗಳಿವೆ. ಮುಂಭಾಗದಲ್ಲಿ ಡಾ.ರಾಜಕುಮಾರ್ ಅವರ ದೊಡ್ಡ ಫೋಟೊ ಇದೆ’ ಅನ್ನುತ್ತಾರೆ ಸದ್ಗುರು ಸಂತೋಷ್.
ಪೆಟ್ರೋಲ್ ಟ್ಯಾಂಕ್ ಮೇಲೆ ಅಚ್ಚೇ ದಿನ್
ಇವೆಲ್ಲದರ ನಡುವೆ ಪೆಟ್ರೋಲ್ ಟ್ಯಾಂಕ್ ಮೇಲೆ ಬರೆಯಿಸಿರುವ ಪದ ಹಲವರ ಗಮನ ಸೆಳೆಯುತ್ತಿದೆ. ಅಚ್ಚೇ ದಿನ್ ಎಂದು ಸ್ಟಿಕರ್ ಹಾಕಿಸಿದ್ದಾರೆ. ‘ವಿಡಂಬನಾತ್ಮಕವಾಗಿ ಅಚ್ಚೇ ದಿನ್ ಎಂದು ಬರೆಯಿಸಿದ್ದೇನೆ. ಈ ಭಾರಿ ನಮ್ಮ ತಂಡ ಕಪ್ ಗೆಲ್ಲಬಹುದು ಎಂಬ ಕಾರಣಕ್ಕೆ ಅಚ್ಚೇ ದಿನ್ ಎಂದುಕೊಳ್ಳಬಹುದು. ಮತ್ತೊಂದು ಕಡೆ ಪೆಟ್ರೋಲ್ ರೇಟ್ ದುಬಾರಿಯಾಗಿರುವುದು ಅಚ್ಚೇ ದಿನ್ ಎಂದು ತಿಳಿದು ಕೊಳ್ಳಬಹುದು’ ಅನ್ನುತ್ತಾರೆ ಸದ್ಗುರು ಸಂತೋಷ್.
ಕಾರಿನ ವಿಡಿಯೋ ವರೈಲ್
ಇನ್ನು, RCB ಮೇಲಿನ ಅಭಿಮಾನ, ಕಾರಿಗೆ ಹೊಸ ಲುಕ್ ಕೊಟ್ಟಿರುವುದನ್ನು ಸದ್ಗುರು ಸಂತೋಷ್ ಅವರು ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. RCB ತಂಡದ ಪರವಾಗಿ ಇರುವ ಅಭಿಮಾನಿಗಳಿಗೆ ಜೋಶ್ ನೀಡಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಕಳೆದ ಐಪಿಎಲ್ ಹೊತ್ತಿಗೆ ತಮ್ಮ ಸ್ಕೂಟರ್’ಗೆ ಐಪಿಎಲ್ ಸ್ಟಿಕರ್ ಮಾಡಿಸಿ ಸಂತೋಷ್ ಅವರು ಸುದ್ದಿಯಾಗಿದ್ದರು. ಈಗಲೂ ಆ ಸ್ಕೂಟರ್ ಹಲವರ ಗಮನ ಸೆಳೆಯುತ್ತಿದೆ. ಈ ಭಾರಿ ಫಿಯಟ್ ಕಾರಿಗೆ ಐಪಿಎಲ್ ಲುಕ್ ಕೊಟ್ಟಿದ್ದಾರೆ. ಇದು ಕೂಡ ಈಗ ಫೋಟೊ, ಸೆಲ್ಫಿ ಪ್ರಿಯರು, RCB ಅಭಿಮಾನಿಗಳನ್ನು ಸೆಳೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






