ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 8 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SAGARA : ಮ್ಯಾನ್‌ ಹೋಲ್‌  ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು.

ಸಾಗರ (Sagara) ನಗರದ ಮಾರ್ಕೆಟ್‌ ರಸ್ತೆಯ ಕೋಮಲ್‌ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಮ್ಯಾನ್‌ ಹೋಲ್‌ ಮುಚ್ಚಳ ಸರಿಪಡಿಸುವಂತೆ ಸ್ಥಳೀಯರು ನಗರಸಭೆಗೆ ಮನವಿ ಮಾಡಿದರು ಪ್ರಯೋಜವಾಗಲಿಲ್ಲ.

ಇದನ್ನೂ ಓದಿ- ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ

ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ವ್ಯಾಪಾರಿ ಶಿವಾನಂದ ಕಾಮತ್‌ ಮತ್ತು ಕೋಮಲ್‌ ರಾಘವೇಂದ್ರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಗುಂಡಿ ಸುತ್ತಲು ಕಲ್ಲುಗಳನ್ನು ಇರಿಸಿ, ಕೆಂಪು ಧ್ವಜ ನೆಟ್ಟು ಪ್ರತಿಭಟಿಸಿದರು. ವಾಹನ ಸವಾರರಿಗೆ ಗುಂಡಿ ಇದೆ ಎಂದು ಗೊತ್ತಾಗಲಿ ಎಂದು ಕೆಂಪು ಧ್ವಜ ನೆಡಲಾಗಿದೆ. ಇನ್ನಾದರು ಮ್ಯಾನ್‌ ಹೋಲ್‌ ಮುಚ್ಚಳ ಸರಿಪಡಿಸಲಿ ಎಂದು ಆಗ್ರಹಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment