SHIVAMOGGA LIVE NEWS | 8 AUGUST 2023
SAGARA : ಮ್ಯಾನ್ ಹೋಲ್ ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು.
![]() |
ಸಾಗರ (Sagara) ನಗರದ ಮಾರ್ಕೆಟ್ ರಸ್ತೆಯ ಕೋಮಲ್ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್ಹೋಲ್ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಮ್ಯಾನ್ ಹೋಲ್ ಮುಚ್ಚಳ ಸರಿಪಡಿಸುವಂತೆ ಸ್ಥಳೀಯರು ನಗರಸಭೆಗೆ ಮನವಿ ಮಾಡಿದರು ಪ್ರಯೋಜವಾಗಲಿಲ್ಲ.
ಇದನ್ನೂ ಓದಿ- ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ
ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ವ್ಯಾಪಾರಿ ಶಿವಾನಂದ ಕಾಮತ್ ಮತ್ತು ಕೋಮಲ್ ರಾಘವೇಂದ್ರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಗುಂಡಿ ಸುತ್ತಲು ಕಲ್ಲುಗಳನ್ನು ಇರಿಸಿ, ಕೆಂಪು ಧ್ವಜ ನೆಟ್ಟು ಪ್ರತಿಭಟಿಸಿದರು. ವಾಹನ ಸವಾರರಿಗೆ ಗುಂಡಿ ಇದೆ ಎಂದು ಗೊತ್ತಾಗಲಿ ಎಂದು ಕೆಂಪು ಧ್ವಜ ನೆಡಲಾಗಿದೆ. ಇನ್ನಾದರು ಮ್ಯಾನ್ ಹೋಲ್ ಮುಚ್ಚಳ ಸರಿಪಡಿಸಲಿ ಎಂದು ಆಗ್ರಹಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200