SHIVAMOGGA LIVE NEWS | 28 MARCH 2024
BYKODU : ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಸೇತುವೆಗೆ ರೋಪ್ ವೇ ಅಳವಡಿಕೆ ಕಾರ್ಯ ಆರಂಭವಾಗಿದೆ. ಬುಧವಾರ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು.
![]() |
ಏನಿದು ರೋಪ್ ವೇ?
ಸಿಗಂದೂರು ಸೇತುವೆ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಸೆಗ್ಮೆಂಟ್ ಜೋಡಣೆ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ರೋಪ್ ವೇ ಸೇತುವೆಯ ಪ್ರಮುಖ ಕಾರ್ಯ. ಇದರ ಆಧಾರದಲ್ಲಿಯೇ ಸೇತುವೆ ಸಮತೋಲನ ಕಾಯ್ದುಕೊಳ್ಳಲಿದೆ.
ಪೂಜೆ ಬಳಿಕ ಕಾರ್ಯಾರಂಭ
ರೋಪ್ ವೇ ಅಳವಡಿಕೆ ಕಾರ್ಯದ ಹಿನ್ನೆಲೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೂಜೆ ಸಲ್ಲಿ ಕಾರ್ಯಾರಂಭ ಮಾಡಿದರು. ಶಿವಮೊಗ್ಗದ ಕಾರ್ಯನಿರ್ವಾಹಕ ಎಂಜಿನಿಯರ್ ದಿವಾಕರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಿಂಗಪ್ಪ, ಉಸ್ತುವಾರಿ ಎಂಜಿನಿಯರ್ ಪೀರ್ ಪಾಷ, ಸುನೀಲ್, ದಿಲೀಪ್ ಕಂಪನಿ ಪ್ರಾಜೆಕ್ಟ್ ಮ್ಯಾನೇಜರ್ ಪೂರ್ಣಚಂದ್ರ ಸತ್ಯನಾರಾಯಣ, ಸಿಗಂದೂರು ದೇವಸ್ಥಾನದ ವ್ಯವಸ್ಥಾಪಕ ಪ್ರಕಾಶ್ ಹಾಗೂ ಕಾರ್ಮಿಕರು ಇದ್ದರು.
ಇದನ್ನೂ ಓದಿ – ಜ್ಯೋತಿಷ್ಯ ಕೇಳಲು ಕರೆ ಮಾಡಿದ ಶಿವಮೊಗ್ಗದ ಮಹಿಳೆಗೆ ಎದುರಾಯ್ತು ದೊಡ್ಡ ಸಂಕಷ್ಟ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200