SHIVAMOGGA LIVE NEWS | 20 OCTOBER 2023
ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗಾಣಿಗನ ಕೆರೆಯಲ್ಲಿ ಕೊಳೆತ ಮೀನುಗಳು ಪತ್ತಯಾಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡಿದ್ದರು. ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿದ್ದು, ತೇಲುತ್ತಿವೆ ಎಂದು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು.
![]() |
ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಹ್ ಕುಮಾರ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ವಿವಿಧ ಗಾತ್ರದ ಮೀನುಗಳು ತೇಲುತ್ತಿರುವುದನ್ನು ಗಮನಿಸಿದರು. ಸತ್ತ ಮೀನುಗಳನ್ನು ಕೆರೆಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ಗ್ರಾಮಸ್ಥರಲ್ಲಿದ್ದ ಆತಂಕ ದೂರಾಗಿದೆ.
ಇದನ್ನೂ ಓದಿ- ಐರಾವತ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದ ಕುಂದಾಪುರದ ಮಹಿಳೆ, ಮನೆಗೆ ಹೋಗಿ ಬ್ಯಾಗ್ ತೆಗೆದಾಗ ಆಘಾತ
ಹೆದ್ದಾರಿ ಪಕ್ಕದಲ್ಲಿಯೇ ಗಾಣಿಗನ ಕರೆ ಇದೆ. ಸಾರ್ವಜನಿಕರು ಈ ಕೆರೆಗೆ ಕಸ ಸುರಿಯುತ್ತಿದ್ದು ನೀರು ಮಲಿನಗೊಳುತ್ತಿದೆ. ಇನ್ಮುಂದೆ ಕೆರೆಗೆ ಕಸ ಸುರಿದರೆ ದಂಡ ವಿಧಿಸಲಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಎಚ್ಚರಿಕೆ ನೀಡಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200