ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019
ನರಸೀಪುರದಲ್ಲಿ ಔಷಧಿ ಪಡೆಯಲು ಬರುತ್ತಿದ್ದವರ ಕಾರು ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಬೈರಾಪುರದಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು, ಬೈರಾಪುರ ಬಳಿಯ ರಸ್ತೆ ಪಕ್ಕದಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಬಾಲ ಸಾಹೇಬ್ ಕೃಷ್ಣ ದೇಸಾಯಿ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಜು ಬೀಳುತ್ತಿದ್ದರಿಂದ ರಸ್ತೆ ಕಾಣಿಸದೇ ಅಪಘಾ ಸಂಭವಿಸಿರುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]