ಜ್ಯೋತಿಷಿ ಕಿರುಕುಳ, ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ, ಯಾರದು ಜ್ಯೋತಿಷಿ? ಏನಿದು ಸಮಸ್ಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 8 ಏಪ್ರಿಲ್ 2019

56523115 590959178050663 8310248872895053824 n.jpg? nc cat=105& nc oc=AQmThc7cwsVWh6QETB2kLCx N3jA xtS2egxyf2saqK6jslDplgrvuoKlYXTW eayqCTYDt41UVVnSI8UvtkphCa& nc ht=scontent.fixe1 1

ರಸ್ತೆ ಮಾಡಿಸಿಲ್ಲ. ನೀರು ಕೊಟ್ಟಿಲ್ಲ. ಕರೆಂಟ್ ಇರಲ್ಲ. ಹೀಗೆ ಮೂಲಸೌಕರ್ಯಗಳಿಲ್ಲ ಎಂಬ ಕಾರಣಕ್ಕೆ ಚುನಾವಣೆ ಬಹಿಷ್ಕರಿಸುವುದು ಸಾಮಾನ್ಯ. ಆದರೆ ಇಲ್ಲಿ, ಜ್ಯೋತಿಷಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಲು ನಿರ್ಧರಿಸಿದೆ.

ಸಾಗರ ತಾಲೂಕಿನ ಹಿರೇಮನೆ ಗ್ರಾಮದಲ್ಲಿ 22 ಕುಟುಂಬದ 60 ಮಂದಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಹತ್ತು ವರ್ಷದಿಂದ ಜ್ಯೋತಿಷಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್’ಗೆ ಅಲೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಚುನಾವಣೆಯನ್ನೇ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಜ್ಯೋತಿಷಿಯಿಂದ ಆಗುತ್ತಿರುವ ಸಮಸ್ಯೆಯೇನು?

ಹಿರೇಮನೆ ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಮೂರು ಎಕರೆ ಜಾಗಕ್ಕೆ ಜ್ಯೋತಿಷಿಯೊಬ್ಬರು ಬೇಲಿ ಹಾಕಿಕೊಂಡಿದ್ದರು. ಈ ಕುರಿತು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್, ಇದು ಸರ್ಕಾರಿ ಜಾಗ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಬೇಲಿಯನ್ನು ತೆಗೆಸಿದ್ದರು. ಆದರೆ ಗ್ರಾಮಸ್ಥರೇ ಬೇಲಿ ತೆಗೆಸಿದ್ದಾರೆ ಎಂದು ಆರೋಪಿಸಿ, ಜ್ಯೋತಿಷಿ ಕೋರ್ಟ್ ಮೆಟ್ಟಲೇರಿದ್ದಾರೆ. 2010ರಲ್ಲಿ ನಡೆದ ಘಟನೆಗೆ ಈವರೆಗೂ ಗ್ರಾಮಸ್ಥರು ಸಾಗರ ಕೋರ್ಟ್’ಗೆ ಅಲೆಯುವಂತಾಗಿದೆ.

2018ರಲ್ಲಿ ಸೊಪ್ಪಿನ ಬೆಟ್ಟದಲ್ಲಿ 11 ಎಕರೆ ಸರ್ಕಾರಿ ಜಾಗಕ್ಕೆ ಬೇಲಿ ಹಾಕಿದ್ದಾರೆ. ಅಧಿಕ ಹಿಡುವಳಿದಾರರಾಗಿದ್ದರೂ ಬಗರ್ ಹುಕುಂ ಅರ್ಜಿ ಸಲ್ಲಿಸಿದ್ದಾರೆ. ಆ ಜಾಗದಲ್ಲಿ ಬೃಹತ್ ಕಟ್ಟಡ ನಿರ್ಮಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ದೂರು ನೀಡಿದ್ದರು. ಇದರಿಂದ ಜ್ಯೋತಿಷಿಯು, 33 ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment