ಸಾಗರದಲ್ಲೂ ಸಾರಿಗೆ ನೌಕರರ ಆಕ್ರೋಶ, ತಟ್ಟೆ, ಲೋಟ ಬಡಿಯುತ್ತ ಮೆರವಣಿಗೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SAGARA NEWS | 12 APRIL 2021

ಸಾಗರದಲ್ಲೂ ಕೆಎಸ್​ಆರ್​ಟಿಸಿ ನೌಕರರು ತಮ್ಮ ಕುಟುಂಬದೊಂದಿಗೆ ತಟ್ಟೆ, ಲೋಟ ಬಾರಿಸುವ ಚಳವಳಿ ನಡೆಸಿದರು. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಜೋಗ ಬಸ್ ನಿಲ್ದಾಣದಿಂದ ಉಪ ವಿಭಗಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಮಹಿಳೆಯರು, ಮಕ್ಕಳು ಈ ಚಳವಳಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು  ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.  ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ಕಿಡಿ ಕಾರಿದರು. ನಿಮ್ಮಿಂದ ಇಂದು ನಾವು ಬೀದಿಗೆ ಬಂದಿದ್ದೇವೆ. ಮಾರ್ಚ್ ತಿಂಗಳ ಸಂಬಳ ನೀಡಿಲ್ಲ. ತಿನ್ನೋಕೆ ಅನ್ನ ಇಲ್ಲ. ನಾವು ಇಂದು ಇಲ್ಲಿ ಕೂತಿದ್ದೇವೆ ಅಂದರೆ ಅದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಉಪ ವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment