SHIVAMOGGA LIVE NEWS | 16 FEBRURARY 2023
SAGARA : ಶ್ರೀ ಮಾರಿಕಾಂಬ ದೇವಿಯನ್ನು (Marikamba Jatre) ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ನಡೆಯಿತು. ಈ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿದೆ.
ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದೆ. ಬುಧವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ ವನಕ್ಕೆ ಬಿಡಲಾಯಿತು.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ, ಹರಿದು ಬಂತು ಲಕ್ಷ ಲಕ್ಷ ಕಾಣಿಕೆ
ರಾಜಬೀದಿ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು. ಡೊಳ್ಳು ತಂಡಗಳು, ವೇಷಭೂಷಣಗಳ ನೃತ್ಯ ಕಲಾವಿದರು, ವಿವಿಧ ವಾದ್ಯಗಳ ತಂಡದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಾವಿರಾರು ಜನರು ಮಧ್ಯರಾತ್ರಿ ಆರಂಭಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200