‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್‌ಎ ಏನಂದ್ರು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ನಾನು ಹಿರಿಯ ಶಾಸಕ. ನನಗೆ ಸಚಿವ (Minister) ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ವರಿಷ್ಠರ ಭೇಟಿಗೆ ಹೊಸದಿಲ್ಲಿಗೂ ತೆರಳುವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೃಢವಾಗಿ ಹೇಳಿದರು.

ಸಾಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಹೊಸದಿಲ್ಲಿಗೆ ಹೋಗಿದ್ದಾಗ ವರಿಷ್ಠರಿಗೆ ಮನವಿ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಕೇಳಿದ್ದೇನೆ. ನನ್ನ ಹಕ್ಕನ್ನು ಕೇಳಲು ಮುಜುಗರವಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈಯಲ್ಲಿ ಇಲ್ಲ. ಹೈಕಮಾಂಡ್ ತೀರ್ಮಾನವೆ ಅಂತಿಮ. ಅದಕ್ಕೆ ನಾವು ಬದ್ಧ. ಸರ್ಕಾರ ಐದು ವರ್ಷ ಸುಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಆಶಯವಾಗಿದೆ ಎಂದರು.

Beluru-Gopalakrishna-in-a-press-meet

ಇದನ್ನೂ ಓದಿ » ರಿಪ್ಪನ್‌ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

Minister

Leave a Comment