ಸಾಗರ ಪಟ್ಟಣದ ವಿವಿಧೆಡೆ ಜಲಾವೃತ, ರಸ್ತೆ ಮೇಲೆ ಹರಿಯುತ್ತಿದೆ ನೀರು, ಶಾಸಕರಿಂದ ಸಿಟಿ ರೌಂಡ್ಸ್

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಕೆಳೆದ ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ.

ಕೆಳದಿ ರಸ್ತೆಯ ಮೇಲೆ ನೀರು

ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ  ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರಿಗೆ ನೆರವಾಗುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

Nanjappa Hospital Advertisement

ಬಡಾವಣೆಗೆ ನುಗ್ಗಿದ ನೀರು

ಇಲ್ಲಿನ ವಿನೋಬನಗರದ ಲೇಔಟ್‍ ಒಂದಕ್ಕೆ ನೀರು ನುಗ್ಗಿದೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ವರದಿಯಾಗಿದೆ.

ಶಾಸಕರಿಂದ ಸಿಟಿ ರೌಂಡ್ಸ್

ಭಾರಿ ಮಳೆ ಹಿನ್ನೆಲೆ ಸಾಗರ ಶಾಸಕ ಹರತಾಳು ಹಾಲಪ್ಪ ಬೆಳಗ್ಗೆಯಿಂದ ಪಟ್ಟಣದ ವಿವಿಧೆಡೆ ರೌಂಡ್ಸ್ ಹಾಕಿದ್ದಾರೆ. ಜಲಾವೃತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು, ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.

ಪುನರ್ವಸತಿ ಕೇಂದ್ರ ಆರಂಭ

ಭಾರಿ ಮಳೆ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ ಎಂದು ಶಾಸಕರ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ. 9480010111 ನಂಬರ್‍ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment