ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 1 ಫೆಬ್ರವರಿ 2020

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಹನ್ನೊಂದು ಸದಸ್ಯರು ಜಿಲ್ಲಾಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ನೀಡಿದ್ದಾರೆ.
ನಾಲ್ಕು ತಿಂಗಳಿನಿಂದ ಸಭೆಯನ್ನೇ ಕರೆದಿಲ್ಲ. ಅಧ್ಯಕ್ಷರ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಬೇಕು ಎಂದು ಮನವಿ ಮಾಡಿದ್ದಾರೆ.
ಬಿಜೆಪಿಯ 6, ಕಾಂಗ್ರೆಸ್ ಮತ್ತು ಜೆಡಿಎಸ್ನ ತಲಾ ಒಬ್ಬರು, ಮೂವರು ಪಕ್ಷೇತರರು ಸಹಿ ಮಾಡಿದ ಪತ್ರವನ್ನು ತಾಪಂ ಇಒಗೆ ಸಲ್ಲಿಸಲಾಗಿದೆ. ತಾಪಂನಲ್ಲಿ ಕಾಂಗ್ರೆಸ್ಗೆ ಸರಳ ಬಹುಮತ ಇಲ್ಲದಿದ್ದರೂ ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರ ಬೆಂಬಲದಿಂದ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜು ಹಕ್ರೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರನ್ನು ಬೆಂಬಲಿಸಿದ್ದ ಮೂವರು ಪಕ್ಷೇತರರು, ಒಬ್ಬ ಜೆಡಿಎಸ್ ಸದಸ್ಯ ಮತ್ತು ಒಬ್ಬ ಕಾಂಗ್ರೆಸ್ ಸದಸ್ಯ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಒತ್ತಾಯಿಸಿದವರಲ್ಲಿ ಸೇರಿದ್ದಾರೆ.
4 ತಿಂಗಳಿನಿಂದ ಸಭೆ ಕರೆಯದ ಕಾರಣವೇ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾರಣ ಎಂದು ಮೇಲ್ನೋಟಕ್ಕೆ ಹೇಳಲಾಗುತ್ತಿದೆ. ಆದರೆ ಒಪ್ಪಂದದ ಪ್ರಕಾರ 30 ತಿಂಗಳು ಅಧಿಕಾರ ಮುಗಿಯುತ್ತಿದ್ದಂತೆ ಮಲ್ಲಿಕಾರ್ಜುನ ಹಕ್ರೆ ರಾಜೀನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ನೀಡಬೇಕಿತ್ತು. ಆದರೆ ಅವರು ರಾಜೀನಾಮೆ ನೀಡಿಲ್ಲ. ಇದುವೆ ಅವಿಶ್ವಾಸ ಮಂಡನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






