ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 20 ಏಪ್ರಿಲ್ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ ಮತ್ತೊಂದು ಹಂತಕ್ಕೆ ತಲುಪಿದೆ. ಇವತ್ತು ಅಧ್ಯಕ್ಷರ ಕೊಠಡಿಗೆ ಸದಸ್ಯರೆ ಬೀಗ ಹಾಕಿ ಪ್ರತಿರೋಧ ತೋರಿಸಿದ್ದಾರೆ.
ಬೀಗ ಹಾಕಲು ಕಾರಣವೇನು?
ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನಾಲ್ಕು ವರ್ಷದಿಂದ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹನ್ನೊಂದು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಸಂಬಂಧ ಎರಡು ಸಭೆಗಳನ್ನು ನಡೆಸಲಾಗಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಒಂದು ಸಭೆಯಲ್ಲಿ ಮೂವರು ಸದಸ್ಯರನ್ನು ಅಮಾನತು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಸದಸ್ಯರೊಬ್ಬರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲಾಗಿದೆ. ಹೀಗಿದ್ದೂ ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಅದ್ದರಿಂದ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಲಾಗುತ್ತಿದೆ ಎಂದು ಸದಸ್ಯರು ಆರೋಪಿಸಿದರು.
ಅವಿಶ್ವಾಸ ಮಂಡನೆಯಾದರೂ ಕರೋನ ಸಭೆ
ಮಲ್ಲಿಕಾರ್ಜುನ ಹಕ್ರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ ಅವರ ಅಧಿಕಾರ ಮೊಟಕುಗೊಂಡಿದೆ. ಹೀಗಿದ್ದೂ ಕರೋನ ವಿಚಾರವಾಗಿ ಇಲಾಖೆ ವಾಹನಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತ್ತಿದ್ದಾರೆ. ಸಭೆಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದಾರೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















