ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 12 ಡಿಸೆಂಬರ್ 2019
ಸೌದಿ ಅರೇಬಿಯಾದಲ್ಲಿ ಆರು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ತನ್ನ ಸ್ನೇಹಿತನೊಬ್ಬನಿಗೆ ಸಹಾಯ ಕೋರಿ ಸಾಗರದ ಸಾಮಾಜಿಕ ಕಾರ್ಯಕರ್ತ ಜಮೀಲ್ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮಾಡಿದ್ದು, ಪ್ರಧಾನಿ ಕಚೇರಿ ಇದಕ್ಕೆ ಪ್ರತಿಕ್ರಿಯಿಸಿದೆ.

ಉತ್ತರಪ್ರದೇಶದ ಲಖ್ನೋದ ಅಖ್ತರ್ ಅಹಮದ್ ಎಂಬಾತ ಜಮೀಲ್ ಅವರ ಸಹೋದರನ ಸ್ನೇಹಿತ. ಇಬ್ಬರೂ ಜತೆಗೆ ಕೆಲಸ ಮಾಡುತ್ತಿದ್ದಾರೆ, ಆರು ದಿನಗಳ ಹಿಂದೆ ರಸ್ತೆ ಅಪಘಾತದಿಂದ ಅಖ್ತರ್ ತೀವ್ರ ಗಾಯಗೊಂಡಿದ್ದು ಸಹೋದರನ ಕೋರಿಕೆ ಮೇರೆಗೆ ಪ್ರಧಾನಿ ಅವರಿಗೆ ದಯಮಾಡಿ ಸಹಾಯ ಮಾಡಿ ಎಂದು ಕೋರಿದ್ದಾರೆ. ಜತೆಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ವಿವರಣೆ ಕೇಳಿದ್ದಾರೆ.
ವಿದೇಶಾಂಗ ಸಚಿವರಿಗೂ ಟ್ವೀಟ್ ಮಾಡಿದ್ದರು
ಸಾಮಾಜಿಕ ಕಾರ್ಯಕರ್ತ ಜಮೀಲ್ ದುಬೈನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅಲ್ಲಿಯ ಕಂಪನಿ ತೀವ್ರ ಕಿರುಕುಳ ನೀಡುತ್ತಿತ್ತು. ಆಗ ವಿದೇಶಾಂಗ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಅವರಿಗೆ ಸಮಸ್ಯೆ ಕುರಿತಂತೆ ಟ್ವೀಟ್ ಮಾಡಿದಾಗ, ಭಾರತದ ರಾಯಭಾರ ಕಚೇರಿಯಿಂದ ಸಂಪೂರ್ಣ ವೆಚ್ಚ ಭರಿಸಿ, ನನ್ನನ್ನು ಕರ್ನಾಟಕದ ಮಂಗಳೂರಿಗೆ ಕಳುಹಿಸಿಕೊಟ್ಟಿದ್ದರು ಅಂತಾರೆ ಜಮೀಲ್.

ನನ್ನ ಸ್ನೇಹಿತನೊಬ್ಬನಿಗೆ ಈ ರೀತಿ ಅಪಘಾತ ಆಗಿರುವುದು ತೀವ್ರ ನೋವುಂಟು ಮಾಡಿದೆ. ಪ್ರಧಾನಿ ಮೋದಿ ಅವರಿಗೆ ಟೀಟ್ ಮಾಡಿದ್ದು ಅವರು ಸಹಾಯ ಮಾಡುತ್ತಾರೆ ಎಂಬ ನಂಬಿಕೆಯೂ ನನಗಿದೆ ಎನ್ನುತ್ತಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Sagara Youth Jameel tweets to Prime Minister Narendra Modi to rescue his friend who met with an accident
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





