ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಏರ್ಪಡಿಸುವ ಮನೆ–ಮನ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆಯ 243 ನೇ ತಿಂಗಳ ಸಂಭ್ರಮ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ ನ. 8ರ ಸಂಜೆ 6.30ಕ್ಕೆ ಲಯನ್ಸ್ ಸಂಸ್ಥೆ ಆತಿಥ್ಯದಲ್ಲಿ ಸಾಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಕೀಲ ಹೆಚ್.ಟಿ. ರಾಘವೇಂದ್ರ, ಉದ್ಯಮಿಗಳಾದ ಎಲ್.ಎನ್. ಕೀರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಸ್ವಾಮಿ, ಕಜಾಪ ಅಧ್ಯಕ್ಷ ಸಿರಿವಂತೆ ಸತ್ಯನಾರಾಯಣ, ಸದಾನಂದ ಶರ್ಮ, ಆಟೊ ಚಾಲಕರ ಸಂಘದ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ಜಿಯಾವುಲ್ಲಾ ಭಾಗವಹಿಸಲಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?

ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು
ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?