ಸಾಗರದಲ್ಲಿ ‍‍ಶ್ರೀಗಂಧ ಮರ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?

SAGARA: ತಾಲೂಕಿನ ಕರ್ಕಿಕೊಪ್ಪದ ಯಡಜಿಗಳೆಮನೆ ಗ್ರಾಮದ ಜಮೀನೊಂದರಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಡಿತಲೆ ಮಾಡಿ ಕದ್ದೊಯ್ದಿರುವ ಘಟನೆ ನಡೆದಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಯಡಜಿಗಳೇಮನೆ ಗ್ರಾಮದ ರೈತ ರಾಮಚಂದ್ರ ವಿ. ಭಟ್ ಎಂಬುವವರ ಜಮೀನಿನಲ್ಲಿ ನೈಸರ್ಗಿಕವಾಗಿ ಬೆಳೆದಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಮನೆಯ ಬಳಿಯೇ ಇದ್ದ ದೊಡ್ಡ ಶ್ರೀಗಂಧದ ಮರಕ್ಕೆ ಸುರಕ್ಷತೆಗಾಗಿ ಟೀ ಗಾರ್ಡ್ ಅಳವಡಿಸಲಾಗಿತ್ತು. ಮೇ 24ರ ಬೆಳಗಿನ ಜಾವ ಮನೆಯವರು ಗಾಢ ನಿದ್ರೆಯಲ್ಲಿದ್ದಾಗ ಕಳ್ಳರು, ಮರವನ್ನು ಕತ್ತರಿಸಿ ತಗೆದುಕೊಂಡು ಹೋಗಿದ್ದಾರೆ.

SAGARA-NEWS-GRAPHICS-BY-SHIVAMOGGA-LIVE

ಕಳುವಾದ ಮರದ ಮೌಲ್ಯ ₹30,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.