ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020
ಸಾಗರ ನಗರದಲ್ಲಿ ಕರೋನ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಸಾಗರ ಪಟ್ಟಣವನ್ನು ಪ್ರವೇಶಿಸುವ ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನ್ ಮಾಡಬೇಕು ಮತ್ತು ವಾಹನಗಳಿಗೆ ಸ್ಯಾನಿಟೈಸರ್ ಮಾಡುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ ಮಾಡಿದ್ದಾರೆ.

ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಚಂದ್ರಶೇಕರ್ ನಾಯ್ಕ್ ಅವರನ್ನು ಭೇಟಿಯಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಾಗರ ಪಟ್ಟಣದಲ್ಲಿ ಶನಿವಾರ ಬೆಳಗ್ಗೆಯೊಳಗೆ ನಾಲ್ಕು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಹೊರಗಿನಿಂದ ಬರುವವರ ತಪಾಸಣೆ ನಡೆಸಬೇಕು. ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೂ ಚರ್ಚೆಸುವುದಾಗಿ ತಿಳಿಸಿದರು.
ನಗರದ 31 ವಾರ್ಡ್ಗಳಲ್ಲೂ ಸ್ಯಾನಿಟೈಸರ್ ಸಿಂಪಡಿಸಬೇಕು. ಸೀಲ್ ಡೌನ್ ಮಾಡಿರುವ ಪ್ರದೇಶದಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಬೇಕು. ಕರೋನ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200