ಸಿಗಂದೂರು ದೇವಿಯ ಮೂಲ ಸ್ಥಳದಲ್ಲಿ ವಿಶೇಷ ಪೂಜೆ, ದೇಗುಲದಲ್ಲಿ ಹೋಮ, ಹವನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022

ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ

ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ ನೀಡಿದರು. ಅದಕ್ಕೂ ಮೊದಲು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಅವರು ಶ್ರೀಗಳನ್ನು ಬರಮಾಡಿಕೊಂಡರು. ಮೂಲ ಸ್ಥಳವಾದ ಸೀಗೆಕಣಿವೆಯಲ್ಲಿ ದೇವಿಗೆ ಶಾಸ್ರೋಕ್ತವಾಗಿ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಜ್ಯೋತಿಯನ್ನು ತಂದು ವಿವಿಧ ಅಲಂಕಾರದ ಪೂಜೆ ಮಾಡಿ ಜಾತ್ರೆಗೆ ಚಾಲನೆ ನೀಡಲಾಯಿತು.

ಬಳಿಕ ದೇವಾಲಯ ಆವರಣದಲ್ಲಿ ಹೋಮ, ಹವನಾದಿಗಳು ಮತ್ತು ವಿಶೇಷ ಪೂಜೆಗಳು ನಡೆದವು. ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

AVvXsEhKGIc4FjzAnElrNQTO4FsFfEJXsVMHfyRTEaSABdvI2KLkVucCW6DJev3fyHJ2h4TKNGpORxKV1HLsRCWOoK69CNJxt65Hg1KeMoZgSWLq1QL 3Tt15BMA

ಮಕರ ಸಂಕ್ರಾಂತಿ ಸಮಯದಲ್ಲಿ ನಡೆಯುವ ಜಾತ್ರೆಯಲ್ಲಿ ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬರುತ್ತಿತ್ತು. ಆದರೆ, ಈ ಬಾರಿ ಕೊರೊನಾ ಕರಿನೆರಳಿನಿಂದಾಗಿ ಜಾತ್ರೆಯನ್ನು ನಿಷೇಧಿಸಿ ಹೆಚ್ಚು ಭಕ್ತರು ಸೇರುವುದಕ್ಕೆ ಕಡಿವಾಣ ಹಾಕಲಾಗಿತ್ತು. ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿದ ಆಡಳಿತ ಮಂಡಳಿಯು ಸರಳವಾಗಿ ಜಾತ್ರೆಯನ್ನು ಆಚರಣೆ ಮಾಡಿದೆ. ಕುಟುಂಬಸ್ಥರೊಂದಿಗೆ ಆಡಳಿತ ಮಂಡಳಿಯ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment