ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022
ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು.
ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ
ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ ನೀಡಿದರು. ಅದಕ್ಕೂ ಮೊದಲು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಅವರು ಶ್ರೀಗಳನ್ನು ಬರಮಾಡಿಕೊಂಡರು. ಮೂಲ ಸ್ಥಳವಾದ ಸೀಗೆಕಣಿವೆಯಲ್ಲಿ ದೇವಿಗೆ ಶಾಸ್ರೋಕ್ತವಾಗಿ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಜ್ಯೋತಿಯನ್ನು ತಂದು ವಿವಿಧ ಅಲಂಕಾರದ ಪೂಜೆ ಮಾಡಿ ಜಾತ್ರೆಗೆ ಚಾಲನೆ ನೀಡಲಾಯಿತು.
ಬಳಿಕ ದೇವಾಲಯ ಆವರಣದಲ್ಲಿ ಹೋಮ, ಹವನಾದಿಗಳು ಮತ್ತು ವಿಶೇಷ ಪೂಜೆಗಳು ನಡೆದವು. ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಕರ ಸಂಕ್ರಾಂತಿ ಸಮಯದಲ್ಲಿ ನಡೆಯುವ ಜಾತ್ರೆಯಲ್ಲಿ ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬರುತ್ತಿತ್ತು. ಆದರೆ, ಈ ಬಾರಿ ಕೊರೊನಾ ಕರಿನೆರಳಿನಿಂದಾಗಿ ಜಾತ್ರೆಯನ್ನು ನಿಷೇಧಿಸಿ ಹೆಚ್ಚು ಭಕ್ತರು ಸೇರುವುದಕ್ಕೆ ಕಡಿವಾಣ ಹಾಕಲಾಗಿತ್ತು. ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿದ ಆಡಳಿತ ಮಂಡಳಿಯು ಸರಳವಾಗಿ ಜಾತ್ರೆಯನ್ನು ಆಚರಣೆ ಮಾಡಿದೆ. ಕುಟುಂಬಸ್ಥರೊಂದಿಗೆ ಆಡಳಿತ ಮಂಡಳಿಯ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






