ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MAY 2023
SAGARA : ತಾಂತ್ರಿಕ ದೋಷದಿಂದ ಕೆಎಸ್ಆರ್ಟಿಸಿ ಬಸ್ (KSRTC Bus) ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು.

ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್ಅರ್ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು.
ಎರಡೂವರೆ ಗಂಟೆ ಕಾದ ಪ್ರಯಾಣಿಕರು
ಬೆಳಗ್ಗೆ 10.30ರ ಹೊತ್ತಿಗೆ ಸಾಗರ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ತೆರಳಿದ ಬಸ್ (KSRTC Bus) ಹಿಂತಿರುಗಲೆ ಇಲ್ಲ. ಸತತ ಎರಡೂವರೆಗೆ ಗಂಟೆ ಕಾದರೂ ಪರ್ಯಾಯ ವ್ಯವಸ್ಥೆ ಆಗಲಿಲ್ಲ. ತಾವು ಬಂದಿದ್ದ ಬಸ್ ಕೂಡ ಮರಳಿ ಬರಲಿಲ್ಲ. ಇದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ನಿಲ್ದಾಣದ ಅಧಿಕಾರಿಗಳನ್ನು ವಿಚಾರಿಸಿ ಹೈರಾಣಾದರು.
ಡಿಪೋ ಮ್ಯಾನೇಜರ್ ಮಧ್ಯ ಪ್ರವೇಶ
ಕಾರವಾರಕ್ಕೆ ತೆರಳಬೇಕಿದ್ದ ಬಸ್ ಕೆಟ್ಟು ನಿಂತ ವಿಚಾರ ತಿಳಿಯುತ್ತಿದ್ದಂತೆ ಡಿಪೋ ಮ್ಯಾನೇಜರ್ ರಾಜಪ್ಪ ಅವರು ಮಧ್ಯ ಪ್ರವೇಶಿಸಿದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ʼಬಸ್ಸಿನ ಹ್ಯಾಂಗರ್ ಸೆಟ್ ತುಂಡಾಗಿದೆ. ನಮ್ಮ ಡಿಪೋದಲ್ಲಿ ಆ ಮಾದರಿ ಬಸ್ಸಿನ ಹ್ಯಾಂಗರ್ ಇಲ್ಲ. ಅದನ್ನು ಸ್ಥಳೀಯವಾಗಿ ಖರೀದಿಸಿ ವ್ಯವಸ್ಥೆ ಮಾಡಿದ್ದೇವೆ. ಯಾವುದೆ ಡಿಪೋದ ವಾಹನಗಳಾಗಲಿ. ಪ್ರಯಾಣಿಕರು ನಮ್ಮವರು. ಅವರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಜವಾಬ್ದಾರಿ. ಹಾಗಾಗಿ ಪರ್ಯಯ ವ್ಯವಸ್ಥೆ ಮಾಡಿದ್ದೇವೆʼ ಎಂದು ರಾಜಪ್ಪ ಅವರು ತಿಳಿಸಿದರು.
ಇದನ್ನೂ ಓದಿ – ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್ ಬಳಿಕ ಹೋರಾಟ ಅಂತ್ಯ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





