ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 2 JANUARY 2025
ಸಾಗರ : ಜ.18ರಂದು ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದ ಷೋಕಾರ್ಡ್ (Show Card) ಬಿಡುಗಡೆ ಮಾಡಲಾಯಿತು. ಖಾಸಗಿ ಬಸ್ ಸ್ಟಾಂಡ್ ಆವರಣದಲ್ಲಿರುವ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಕಚೇರಿಯಲ್ಲಿ ತೋಟಗಾರ್ಸ್ ಅಧ್ಯಕ್ಷ ಕೆ.ಸಿ.ದೇವಪ್ಪ ಷೋಕಾರ್ಡ್ ಬಿಡುಗಡೆ ಮಾಡಿದರು.
ಸಮಾವೇಶದಲ್ಲಿ ಅಡಿಕೆ ಬೆಳೆಗಾರರು, ಕೃಷಿ ಕಾರ್ಮಿಕರು, ಅವಲಂಬಿತರೆಲ್ಲ ಭಾಗವಹಿಸಬೇಕು. ಪಕ್ಷಾತೀತ, ಜಾತ್ಯಾತೀತವಾಗಿ ಸಮಾವೇಶ ನಡೆಬೇಕು. 25 ಸಾವಿರ ಜನರನ್ನು ಸಮಾವೇಶಕ್ಕೆ ಸೇರಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊರಬೇಕು. – ಟಿ.ಡಿ.ಮೇಘರಾಜ್, ಬಿಜೆಪಿ ಜಿಲ್ಲಾಧ್ಯಕ್ಷ

ಅಡಿಕೆ ಬೆಳೆಯ ಮೇಲೆ ತೂಗುಗತ್ತಿ ಇದೆ. ಅಡಿಕೆ ಬೆಳೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತಹ ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಬೇಕಿದೆ. ಅಡಿಕೆ ಬೆಳೆಯನ್ನು ಪ್ರತಿನಿಧಿಸುವ ಎಲ್ಲ ಸಹಕಾರ ಸಂಘಗಳು ಸಮಾವೇಶಕ್ಕೆ ಕೈ ಜೋಡಿಸಿವೆ. – ಬಿ.ಎ.ಇಂದೂಧರ ಬೇಸೂರು, ಆಪ್ಸ್ಕೋಸ್ ಅಧ್ಯಕ್ಷ

ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಅಡಿಕೆ ಧಾರಣೆ | 1 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















