ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

ಸಾಗರ: ಐತಿಹಾಸಿಕ ಸಿಗಂದೂರು ಸೇತುವೆಯನ್ನು (Sigandur Bridge) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಲೋಕಾರ್ಪಣೆ ಮಾಡಿದರು. ಶರಾವತಿ ನದಿಗೆ ಬಾಗಿನ ಅರ್ಪಿಸಿ, ಸೇತುವೆ ಉದ್ಘಾಟಿಸಿದರು.

ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ

ಸಿಗಂದೂರು ಸೇತುವೆ ಲೋಕಾರ್ಪಣೆ ಹಿನ್ನೆಲೆ ಗಣಪತಿ ಹೋಮ ನಡೆಯಿತು. ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್‌.ಅರುಣ್‌, ಡಾ.ಧನಂಜಯ ಸರ್ಜಿ, ಭಾರತಿ ಶೆಟ್ಟಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಹೋಮದಲ್ಲಿ ಪಾಲ್ಗೊಂಡಿದ್ದರು.

ಸೇತುವೆ ಲೋಕಾರ್ಪಣೆ, ಫೋಟೊ ಸೆಷನ್‌

ಸೇತುವೆ ಲೋಕಾರ್ಪಣೆಗು ಮುನ್ನ ಶರಾವತಿ ನದಿಗೆ ಬಾಗಿನ ಅರ್ಪಿಸಲಾಯಿತು. ಲೋಕಾರ್ಪಣೆ ಕಾರ್ಯಕ್ರಮದ ಬಳಿಕ ಸಚಿವ ನಿತಿನ್‌ ಗಡ್ಕರಿ ಅವರು ಸೇತುವೆ ವೈಭವವನ್ನು ಕಣ್ತುಂಬಿಕೊಂಡರು. ಅಲ್ಲದೆ ಸೇತುವೆ ಮೇಲೆ ಫೋಟೊ ಸೆಷನ್‌ ನಡೆಸಿದರು. ಸಂಸದರು, ಶಾಸಕರು ಸೇರಿದಂತೆ ಹಲವರು ಗಣ್ಯರೊಂದಿಗೆ ಸೇತುವೆ ಮೇಲೆ ಪೋಸ್‌ ನೀಡಿದರು.

sigandur bridge inaugurated

sigandur bridge inaugurated

sigandur bridge inaugurated

sigandur bridge inaugurated

sigandur bridge inaugurated

sigandur bridge inaugurated by Nitin Gadkari

Sigandur-Bridge-Inaugurated

Leave a Comment