ಸಿಗಂದೂರು ಜಾತ್ರೆಗೆ ದಿನಾಂಕ ನಿಗದಿ, ಏನೆಲ್ಲ ಕಾರ್ಯಕ್ರಮ ಇರಲಿದೆ? ಯಾರೆಲ್ಲ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 JANUARY 2024

SAGARA : ಜ.14 ಮತ್ತು 15ರಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ದೇವಸ್ಥಾನದಲ್ಲಿ ಎರಡು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಏನೇನೆಲ್ಲ ಕಾರ್ಯಕ್ರಮ ಇರಲಿದೆ?

ಜ.14 ರಂದು ಬೆಳಗ್ಗೆ ಶ್ರೀ ಕ್ಷೇತ್ರದಲ್ಲಿ ದೇವಿಗೆ ಮಹಾಭಿಷೇಕ, ಹೂವು ಮತ್ತು ಆಭರಣದ ಅಲಂಕಾರ ನೆರವೇರಿಸಲಾಗುತ್ತದೆ. ಗೋಪೂಜೆ, ಗುರು ಪೂಜೆ ನಡೆಯಲಿದೆ. ರಥ ಮತ್ತು ಪಲ್ಲಕ್ಕಿಯನ್ನು ಮೂಲಸ್ಥಾನಕ್ಕೆ ಕೊಂಡೊಯ್ಯಲಾಗುತ್ತದೆ. ದೇವಿಯ ಮೂಲ ಸ್ಥಳ ಸೀಗೆ ಕಣಿವೆಯಲ್ಲಿ ಪೂಜೆ ಸಲ್ಲಿಸಿ ಪೂರ್ಣಕುಂಭದೊಂದಿಗೆ ಧರ್ಮಜ್ಯೋತಿಯ ಮೆರವಣಿಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಗುರು ಪೂಜೆ, ಸಂಜೆ 6ಕ್ಕೆ ಗಂಗಾರತಿ ನಡೆಯಲಿದೆ.

ಜ.15 ರಂದು ಬೆಳಗ್ಗೆ ನವಚಂಡಿಕಾ ಹೋಮ, ದುರ್ಗಾ ಪೂಜೆ, ರಂಗ ಪೂಜೆ ನೆಡೆಯಲಿದೆ.

ಜಾತ್ರೆಗೆ ಶ್ರೀಗಳ ಸಾನ್ನಿಧ್ಯ, ಗಣ್ಯರಿಂದ ಉದ್ಘಾಟನೆ

ಮಳಲಿ ಮಠದ ಡಾ. ನಾಗಭೂಷಣ್ ಶಿವಾಚಾರ್ಯ ಸ್ವಾಮೀಜಿ ಜಾತ್ರೆಯ ದಿವ್ಯ ಸಾನಿಧ್ಯ ವಹಿಸುವರು. ಕೇರಳದ ಶಿವಗಿರಿ ಬ್ರಹ್ಮ ಶ್ರೀ ನಾರಾಯಣಗುರು ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು ಧರ್ಮಜ್ಯೋತಿಗೆ ಚಾಲನೆ ನೀಡಲಿದ್ದಾರೆ. ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ. ಎಂ ತಿಮ್ಮೇಗೌಡ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಅನುವಂಶೀಯ ಧರ್ಮದರ್ಶಿ ಡಾ. ರಾಮಪ್ಪ ತಿಳಿಸಿದ್ದಾರೆ.

ಪ್ರತಿ ದಿನ ಸಂಜೆ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮ ನಡೆಯಲಿದೆ. ಯಕ್ಷಗಾನ, ಮ್ಯಾಜಿಕ್ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಗುಲಕ್ಕೆ ಭಕ್ತರು ಬಂದು ಹೋಗಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.ಹೆಚ್.ಆರ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ

ಜಾತ್ರೆಗೆ ಬರುವ ಭಕ್ತರಿಗೆ ಅನ್ನಸಂತರ್ಪಣೆ, ಸಾರಿಗೆ ವ್ಯವಸ್ಥೆ ಮತ್ತು ವಿಶೇಷ ಲಾಂಚ್ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಿಯ ದರ್ಶನ ಪಡೆಯಬೇಕು ಎಂದು ದೇಗುಲ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವೈವಭದ ತೆಪ್ಪೋತ್ಸವ, ಕಣ್ತುಂಬಿಕೊಂಡ ಜನಸಾಗರ, ಇಲ್ಲಿದೆ 12 ಫೋಟೊಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment