ದಿಢೀರ್‌ ಸ್ಥಗಿತಗೊಂಡ ಸಿಗಂದೂರು ಲಾಂಚ್‌ಗಳು, ಸ್ಥಳೀಯರು, ಪ್ರವಾಸಿಗರಿಗೆ ಸಂಕಷ್ಟ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 22 APRIL 2024

BYKODU : ತಾಂತ್ರಿಕ ದೋಷದಿಂದ ಸಿಗಂದೂರು ಲಾಂಚ್‌ಗಳು ಏಕಾಏಕಿ ಸ್ಥಗಿತಗೊಂಡಿವೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಸಂಕಷ್ಟಕ್ಕೀಡಾದರು.

ಶರಾವತಿ ಹಿನ್ನೀರು ಭಾಗದ ಹೊಳೆಬಾಗಿಲು ಮತ್ತು ಕಳಸವಳ್ಳಿ ಮಧ್ಯೆ ಸಂಚಾರಕ್ಕೆ ಮೂರು ಲಾಂಚ್‌ಗಳಿವೆ. ಈ ಪೈಕಿ ಎರಡು ಲಾಂಚ್‌ಗಳು ತಾಂತ್ರಿಕ ದೋಷದಿಂದ ಭಾನುವಾರ ಸ್ಥಗಿತಗೊಂಡಿದ್ದವು. ಬೇಸಿಗೆ ರಜೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಲಾಂಚ್‌ ಸಿಗದೆ ಪ್ರವಾಸಿಗರು ಸಂಕಷ್ಟಕ್ಕೀಡಾದರು. ಇನ್ನು, ಲಾಂಚ್‌ ಮೇಲೆ ಅವಲಂಬಿತವಾಗಿರುವ ಸ್ಥಳೀಯರು ಕೂಡ ಪೇಚಾಡುವಂತಾಯಿತು. ಲಾಂಚ್‌ಗಳ ತಾಂತ್ರಿಕ ದೋಷ ಪರಿಹರಿಸಿ ಸಮರ್ಪಕೆ ಸೇವೆ ಒದಗಿಸುವಂತೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಮೆಂಟ್‌ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment