ವೀಕೆಂಡ್ ಕರ್ಫ್ಯೂ ಬೆನ್ನಿಗೆ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರಿಗೆ ಮಹತ್ವದ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SAGARA NEWS | 7 ಜನವರಿ 2022

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ಬೆನ್ನಿಗೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ. ವೀಕೆಂಡ್ ಕರ್ಫ್ಯೂ ಸಂದರ್ಭ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದೆ.

221020 Siganduru Temple General Image 1

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು, ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿಯಂತೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ವೀಕೆಂಡ್ ಸಂದರ್ಭ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಬರುತ್ತಾರೆ. ದೇವಿಯ ದರ್ಶನ ಪಡೆಯುತ್ತಾರೆ. ಆದರೆ ಸರ್ಕಾರ ಕರೋನ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ದೇವಸ್ಥಾನ ಬಂದ್ ಮಾಡಲಾಗುತ್ತಿದೆ.

ಶ್ರೀಧರ ಆಶ್ರಮಯವು ಬಂದ್

ಇತ್ತ ವರದಳ್ಳಿಯ ಶ್ರೀಧರಾಶ್ರಮವು ವೀಕೆಂಡ್ ಕರ್ಫ್ಯೂ ಸಂದರ್ಭ ಬಂದ್ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಶನಿವಾರ ಮತ್ತು ಭಾನುವಾರ ಭಕ್ತರು ಆಶ್ರಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಉಳಿದ ದಿನಗಳಂದು ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಕೋವಿಡ್ ಆಶ್ರಮ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2022

Leave a Comment