SHIVAMOGGA LIVE NEWS | 17 JANUARY 2024
KARGAL : ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿರುವ ಸಮಯಕ್ಕೆ ಸರಿಯಾಗಿ 108 ಆಂಬುಲೆನ್ಸ್ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಶರತ್ ಕಾಳಮಂಜಿ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಮೌನ ಪ್ರತಿಭಟನೆ ನಡೆಸಿದರು.
ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ವಾಹನ ಲಭ್ಯವಿಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಓಡಾಟದ ಕುರಿತು ಯಾವುದೆ ಮಾಹಿತಿ ಲಭ್ಯವಿಲ್ಲ. ಆದ್ದರಿಂದ ಈ ಕೂಡಲೆ 108 ಆಂಬುಲೆನ್ಸ್ ಲಭ್ಯವಾಗುವಂತೆ ಮಾಡಬೇಕು ಧರಣಿ ನಿರತರು ಆಗ್ರಹಿಸಿದರು. ಆರೋಗ್ಯಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಆಗಮಿಸಿ, ಇನ್ಮುಂದೆ ಆಂಬುಲೆನ್ಸ್ ಲಭ್ಯತೆ ಕುರಿತು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದನ್ನೂ ಓದಿ – SHIMOGA JOBS | ನಗರದ ಎರಡು ಪ್ರತಿಷ್ಠಿತ ಶೋ ರೂಂಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200