SHIVAMOGGA LIVE NEWS | 24 SEPTEMBER 2023
SAGARA : ಪಟ್ಟಣದ ಬಡಾವಣೆಯೊಂದರಲ್ಲಿ (Layout) ಅಪರೂಪದ ತಳಿಯ ಕಾಡುಪಾಪ ಕಾಣಿಸಿಕೊಂಡಿದೆ. ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಅದನ್ನು ಕಾಡಿಗೆ ಬಿಡಲಾಯಿತು.
ಸಾಗರ – ಸಿಗಂದೂರು (Sigandur) ರಸ್ತೆಯ ಲೇ ಔಟ್ನ ಬೇಲಿಯ ನಡುವೆ ಈ ಕಾಡುಪಾಪ ಕಾಣಿಸಿಕೊಂಡಿದೆ. ಇಂಗ್ಲಿಷ್ನಲ್ಲಿ ಇದನ್ನು ಸ್ಲೆಂಡರ್ ಲೋರಿಸ್ ಎಂದು ಕರೆಯಲಾಗುತ್ತದೆ. ನಿಧಾನವಾಗಿ ಸಾಗುವ, ಓಡಲು, ಹಾರಲು ಬಾರದ ಸೌಮ್ಯ ಸ್ವಭಾವದ ಪ್ರಾಣಿ ಎಂದು ಗುರುತಿಸಲಾಗಿದೆ.
‘ದಟ್ಟ ಕಾಡಿನಲ್ಲಿ ಕಾಣಿಸುವ ಕಾಡುಪಾಪ ಪಟ್ಟಣದ ಸಮೀಪ ಬಂದಿರುವುದು ಆಶ್ಚರ್ಯ. ಹಗಲು ವೇಳೆ ಇದಕ್ಕೆ ಕಣ್ಣು ಕಾಣಿಸುವುದಿಲ್ಲ. ರಾತ್ರಿ ವೇಳೆ ಮಿಡತೆ, ಚಿಟ್ಟೆಗಳನ್ನು ತಿಂದು ಇವು ಬದುಕುತ್ತವೆ’ ಎಂದು ಅಖಿಲೇಶ್ ಚಿಪ್ಪಳಿ ತಿಳಿಸಿದರು.
ಇದನ್ನೂ ಓದಿ – ಬಸ್ ಹತ್ತಿ ಸೀಟ್ನಲ್ಲಿ ಕುಳಿತು ಬ್ಯಾಗ್ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200