ಸಾಗರ: ಸೊಂಟ ನೋವು ತಾಳಲಾರದೆ 9ನೇ ತರಗತಿ ವಿದ್ಯಾರ್ಥಿ ಆಕಾಶ್ (14) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಗರ ಬಡಾವಣೆಯ ತಮ್ಮ ಮನೆಯಲ್ಲಿ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಸಾಗರದ ಸಿದ್ದೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್, ಕೆಲ ದಿನಗಳ ಹಿಂದೆ ನೀರು ತರಲು ತೆರಳಿದ್ದಾಗ ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದ ಎನ್ನಲಾಗಿದೆ. ತೀವ್ರ ನೋವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಓದುಗರ ಗಮನಕ್ಕೆ: ನೀವು ಯಾವುದೇ ಕಷ್ಟದಲ್ಲಿದ್ದರೆ ಅಥವಾ ಸಹಾಯದ ಅಗತ್ಯವಿದ್ದರೆ, ದಯವಿಟ್ಟು ಭಾರತದ ಮಾನಸಿಕ ಆರೋಗ್ಯ ಸಹಾಯವಾಣಿ Kiran (1800-599-0019) ಅಥವಾ Disha (104) ಗೆ ಕರೆ ಮಾಡಿ. ಸಹಾಯ ಪಡೆಯಿರಿ.