SHIVAMOGGA LIVE NEWS | 16 MAY 2023
SAGARA : ಕಾಲೇಜು ಬಳಿ ಕೆಎಸ್ಆರ್ಟಿಸಿ ಬಸ್ಸುಗಳ (Protest For Bus) ನಿಲುಗಡೆಗೆ ಒತ್ತಾಯಿಸಿ ಸಾಗರದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಬಸ್ಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಸರ್ಕಾರಿ ಪದವಿ ಕಾಲೇಜು ಬಳಿ ಕೆಎಸ್ಆರ್ಟಿಸಿ ಬಸ್ಸುಗಳನ್ನು ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್ ರಾಜಪ್ಪ ಅವರು, ಬೆಳಗ್ಗೆ ಸಾಗರ – ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುವ ಸಾಗರ ಡಿಪೋದ ಎಲ್ಲ ಬಸ್ಸುಗಳಲ್ಲಿಯು ವಿದ್ಯಾರ್ಥಿಗಳು ಸಂಚರಿಸಬಹುದು. ಆದರೆ ಸಂಜೆ ಕಾಲೇಜು ಬಿಡುವ ವೇಳೆಗೆ ಸಾಗರ ಡಿಪೋದ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ – ಬೈಕ್ಗೆ ಸಿಟಿ ಬಸ್ ಡಿಕ್ಕಿ, ರೊಚ್ಚಿಗೆದ್ದ ಜನರಿಂದ ಗ್ಲಾಸ್ಗೆ ಕಲ್ಲು
ಫೋನ್ ಮೂಲಕ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ಸೌಕರ್ಯ ಒದಗಿಸುವ ಕುರಿತು ಸಾಗರಕ್ಕೆ ಬಂದ ಬಳಿಕ ಡಿಪೋ ಮ್ಯಾನೇಜರ್ ಜೊತೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಭರವಸೆ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200