ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021
ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಇಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಸಂಘಟನೆಯ ಜಿಲ್ಲಾ ಸಂಚಾಲಕ ಅಭಿಷೇಕ್, ಪ್ರಮುಖರಾದ ಶಿಲ್ಪಾ, ರಂಜಿತಾ, ಪ್ರೀತಮ್, ಕ್ಷಮಾ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ | ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















