ನಿರಂತರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ, ಇನ್ನೆರಡು ದಿನ ಮಳೆ ಸುರಿದರೆ ಬಿತ್ತಿದ ಬೀಜ ಕೊಳೆಯುವ ಭಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | TALAGUPPA NEWS | 18 JUNE 2021

ತಾಳಗುಪ್ಪ ಹೋಬಳಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭತ್ತದ ಗದ್ದೆಗಳು ಜಲಾವೃತವಾಗಿವೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ರಾಷ್ಟ್ರೀಯ ಹೆದ್ದಾರಿ 206 ಇಕ್ಕೆಲೆಗಳಲ್ಲಿ ಎಲ್ಲ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ. ಗುಂಡಿಬೈಲು ಗದ್ದೆ ಬಯಲು ನೀರಲ್ಲಿ ಮುಳುಗಿದ್ದು ಇನ್ನೆರಡು ದಿನ ಮಳೆ ಮುಂದುವರಿದರೆ ಬಿತ್ತಿದ ಬೀಜ ಕೊಳೆಯುವ ಸಾಧ್ಯತೆ ಇದೆ.

ಮಳೆಗಾಲ ಪೂರ್ವದಲ್ಲಿ ಚರಂಡಿ ಹೂಳೆತ್ತಿಸುವ ಕಾಮಗಾರಿ ನಡೆಯದೆ, ಬೆಳ್ಳ, ರಸ್ತೆ, ಅಚಾರ್ಯ ಹೋಟೆಲ್ ಪಕ್ಕದ ರಸ್ತೆಯಲ್ಲಿ ಚರಂಡಿ ನೀರು ರಸ್ತೆಗೆ ನುಗ್ಗುತ್ತಿದೆ. ತಾಳಗುಪ್ಪದಲ್ಲಿ ಕಳೆದ 48 ತಾಸಿನಲ್ಲಿ 196.20 ಎಂಎಂ ಮಳೆ ಸುರಿದಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

Leave a Comment