ಸಾಗರ: ವಿದ್ಯಾರ್ಥಿಗೆ ಅಮಾನವೀಯವಾಗಿ ದೈಹಿಕ ದಂಡನೆ ನೀಡಿದ ಆರೋಪದ ಹಿನ್ನೆಲೆ ಸಾಗರ ತಾಲೂಕಿನ ಶೆಡ್ತೀಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ (teacher) ಪ್ರಮೋದ್ ಸಣ್ಣಕ್ಕಿ ಎಂಬುವರನ್ನು ಅಮಾನತುಗೊಳಿಸಿ ಡಿಡಿಪಿಐ ಮಂಜುನಾಥ ಸ್ವಾಮಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?
ಶಿಕ್ಷಕ ಪ್ರಮೋದ ಅವರು ಮಾರ್ಚ್ 12ರಂದು 7ನೇ ತರಗತಿ ವಿದ್ಯಾರ್ಥಿಗೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಾರ್ಥನೆ ಸಮಯದ ನಂತರ ವಿದ್ಯಾರ್ಥಿಯನ್ನು ವಿಚಾರಿಸುವ ನೆಪದಲ್ಲಿ ಶಿಕ್ಷಕರು ಈ ರೀತಿ ದಂಡನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಡಿಡಿಪಿಐ ಅವರು ಪ್ರಮೋದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಲಾಗಿದೆ. ಅಮಾನತಿನ ಅವಧಿಯಲ್ಲಿ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.







