ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 1 AUGUST 2024 : ಲಿಂಗನಮಕ್ಕಿ ಜಲಾಶಯದ ಮೂರು ಗೇಟ್ಗಳ (Gates) ಮೂಲಕ ಇವತ್ತು ನೀರು ಹೊರಬಿಡಲಾಯಿತು. 10 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಯಿತು.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಸ್ತುತ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಒಂದು ವೇಳೆ 50 ಸಾವಿರ ಕ್ಯೂಸೆಕ್ ನೀರು ಬಿಟ್ಟರೆ ಸುಮಾರು 450 ಮನೆಗಳು ಜಲಾವೃತವಾಗಲಿವೆ. ಒಂದು ಲಕ್ಷ ಕ್ಯೂಸೆಕ್ ನೀರು ಹೊರ ಬಿಟ್ಟರೆ ಸುಮಾರು 2 ಸಾವಿರ ಮನೆಗಳು ಮುಳುಗಡೆ ಆಗಲಿವೆ ಎಂದರು.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುವ ವಿಚಾರ ತಿಳಿದು ಸುತ್ತಮುತ್ತಲ ನಿವಾಸಿಗಳು, ಕೆಪಿಸಿ ಸಿಬ್ಬಂದಿ, ಅವರ ಕುಟುಂಬದವರು ಜಲಾಶಯದ ಮುಂದೆ ಸೇರಿದ್ದರು. ಪ್ರತಿ ಗೇಟ್ನಿಂದ ನೀರು ಹೊರ ಬಿಡುತ್ತಿದ್ದಂತೆ ನೆರೆದಿದ್ದವರು ಸಂಭ್ರಮಿಸಿದರು.
ಇದನ್ನೂ ಓದಿ ⇓
ಅಪಾಯದ ಸ್ಥಿತಿಯಲ್ಲಿ ಮರಗಳು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್, ಏನೆಲ್ಲ ಸೂಚಿಸಿದರು?
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು















