ಮಂಗನ ಕಾಯಿಲೆ ಭಯ, ಮುಪ್ಪಾನೆಯಲ್ಲಿ ಚಾರಣ ನಿರ್ಬಂಧ, ಸಿಗಂದೂರು ಭಕ್ತರಿಗೂ ಸದ್ಯದಲ್ಲೇ ಮಾರ್ಗಸೂಚಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019

ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.

Sigandur Launch General Image 1 1

ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ

ಇನ್ನು, ಸಿಗಂದೂರು ಚೌಡೇಶ್ವರಿ ಸನ್ನಿಧಿಗೆ ತೆರಳುವ ಭಕ್ತರಿಗೆ, ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜಿಸಿದೆ. ಸಂಕ್ರಾಂತಿ ಸಂದರ್ಭ, ಸಿಗಂದೂರಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಸ್ಥಾನಕ್ಕೆ ತೆರಳುವ ಭಕ್ತರು, ಲಾಂಚ್ ಹತ್ತುವ ಹಸಿರುಮಕ್ಕಿ ಭಾಗದಲ್ಲಿ, ಮಂಗಗಳು ಅಸಹಜವಾಗಿ ಸಾವನ್ನಪ್ಪಿವೆ. ಈ ಭಾಗದಲ್ಲಿ ಪರಿಶೀಲನೆ ನಡೆಸಿದಾಗ ಮಂಗನ ಕಾಯಿಲೆ ಇರುವ ಕುರಿತು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಯೋಜಿಸಲಾಗಿದೆ.

ಭಕ್ತರು ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದ ಒಳಗೆ ತೆರಳದಂತೆ ಸುಚಿಸಲಾಗುತ್ತಿದೆ. ಅಷ್ಟೇ ಅಲ್ಲ, ಶೀಘ್ರವೇ ಪ್ರವಾಸಿಗರಲ್ಲಿ ಮಂಗನ ಕಾಯಿಲೆ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಲು ತೀರ್ಮಾನಿಸಲಾಗಿದೆ.

https://www.youtube.com/watch?v=6ZGFuL_hds4&t=16s

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment