| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ನಗರದ 13 ಸಾವಿರ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಮೆಸ್ಕಾಂ, ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ವಿದ್ಯುತ್ ಮಾರ್ಗದ ಮೂಲಕ ಅನುಷ್ಠಾನ ಗೊಳಿಸಲು ಮುಂದಾಗಿದೆ. ಇದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ಉಂಟಾಗುತ್ತಿದೆ. ಆವಿನಹಳ್ಳಿ ಹೋಬಳಿಯ ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
![]()
ಆವಿನಹಳ್ಳಿ ಹೋಬಳಿಯ ಗ್ರಾಮಾಂತರ ಪ್ರದೇಶದ ಜನರಿಗೆ ಗುಣಮಟ್ಟದ ವಿದ್ಯುತ್ (Power) ಪೂರೈಕೆಗಾಗಿ ಗಿಣಿವಾರದಲ್ಲಿ 33 ಕೆ.ವಿ. ವಿದ್ಯುತ್ ಗ್ರಿಡ್ ಸ್ಥಾಪಿಸಬೇಕು. ಹರಿದ್ರಾವತಿಯಲ್ಲೂ ಇದೇ ಮಾದರಿಯ ಗ್ರಿಡ್ ಸ್ಥಾಪಿಸುವ ಮೂಲಕ ಬಟ್ಟೆಮಲ್ಲಪ್ಪ, ಹೆಗ್ಗೋಡು ಹಾಗೂ ಸುತ್ತಲಿನ ಗ್ರಾಮಗಳ ವಿದ್ಯುತ್ ಗ್ರಾಹಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಸಮಿತಿಯ ಎಸ್.ವಿ.ಹಿತಕರ ಜೈನ್, ಕೆ.ಎನ್. ವೆಂಕಟಗಿರಿ, ತೀ.ನ. ಶ್ರೀನಿವಾಸ್, ಸುಂದರ್ ಸಿಂಗ್, ವಿಜಯೇಂದ್ರ ಶ್ಯಾನಭಾಗ್, ಮಂಜುನಾಥ್ ಇದ್ದರು.

ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್ ಮೇಲಿದ್ದ ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟರ್ ಕಟೌಟ್ ಕದ್ದೊಯ್ದ ದುಷ್ಕರ್ಮಿಗಳು
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()