‘ಸರಿಯಾಗಿ ಕರೆಂಟ್‌ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಸಾಗರ : ಅಸಮರ್ಪಕ ವಿದ್ಯುತ್ (Power) ಪೂರೈಕೆ ಖಂಡಿಸಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿಯ ವತಿಯಿಂದ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ನಗರದ 13 ಸಾವಿರ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಮೆಸ್ಕಾಂ, ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಾಂತರ ವಿದ್ಯುತ್ ಮಾರ್ಗದ ಮೂಲಕ ಅನುಷ್ಠಾನ ಗೊಳಿಸಲು ಮುಂದಾಗಿದೆ. ಇದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್‌ ಉಂಟಾಗುತ್ತಿದೆ. ಆವಿನಹಳ್ಳಿ ಹೋಬಳಿಯ ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

Protest-for-electricity-in-Sagara.

ಆವಿನಹಳ್ಳಿ ಹೋಬಳಿಯ ಗ್ರಾಮಾಂತರ ಪ್ರದೇಶದ ಜನರಿಗೆ ಗುಣಮಟ್ಟದ ವಿದ್ಯುತ್ (Power) ಪೂರೈಕೆಗಾಗಿ ಗಿಣಿವಾರದಲ್ಲಿ 33 ಕೆ.ವಿ. ವಿದ್ಯುತ್ ಗ್ರಿಡ್ ಸ್ಥಾಪಿಸಬೇಕು. ಹರಿದ್ರಾವತಿಯಲ್ಲೂ ಇದೇ ಮಾದರಿಯ ಗ್ರಿಡ್ ಸ್ಥಾಪಿಸುವ ಮೂಲಕ ಬಟ್ಟೆಮಲ್ಲಪ್ಪ, ಹೆಗ್ಗೋಡು ಹಾಗೂ ಸುತ್ತಲಿನ ಗ್ರಾಮಗಳ ವಿದ್ಯುತ್ ಗ್ರಾಹಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಎಸ್.ವಿ.ಹಿತಕರ ಜೈನ್, ಕೆ.ಎನ್. ವೆಂಕಟಗಿರಿ, ತೀ.ನ. ಶ್ರೀನಿವಾಸ್, ಸುಂದರ್ ಸಿಂಗ್, ವಿಜಯೇಂದ್ರ ಶ್ಯಾನಭಾಗ್, ಮಂಜುನಾಥ್ ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment