SHIVAMOGGA LIVE NEWS | 5 JUNE 2024
SAGARA : ಶರಾವತಿ ಹಿನ್ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ ಜೂ.5ರಿಂದ ಕಳಸವಳ್ಳಿ – ಅಂಬಾರಗೋಡ್ಲು ಲಾಂಚ್ನಲ್ಲಿ (Sigandur Launch) ವಾಹನ ಸಾಗಾಟ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
![]() |
ಲಾಂಚ್ನಲ್ಲಿ ವಾಹನ ಸಾಗಾಟ ಸ್ಥಗಿತಗೊಳಿಸಿರುವುದರಿಂದ ಕರೂರು ಹೋಬಳಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಆರಂಭವಾಗಿ ನೀರಿನ ಮಟ್ಟ ಏರಿದಲ್ಲಿ ಮಾತ್ರ ಮತ್ತೆ ವಾಹನ ಸಾಗಾಟ ಪುನಾರಂಭವಾಗಲಿದೆ. ಶರಾವತಿ ನದಿಯ ಹಿನ್ನೀರು ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಹಸಿರುಮಕ್ಕಿ – ಮುಪ್ಪಾನೆ ಲಾಂಚ್ ಸೇವೆ ನಿಲ್ಲಿಸಲಾಗಿದೆ.
ಇದನ್ನೂ ಓದಿ – ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?
ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಸಿಗಂದೂರು ಲಾಂಚ್ ಸೇವೆ ಸ್ಥಗಿತವಾಗಿತ್ತು. ಇದರಿಂದ ಜನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿತ್ತು. ಈ ಬಾರಿ ಉತ್ತಮ ಮಳೆಯಾದರೆ ಲಾಂಚ್ ಸೇವೆಗೆ ಅನುಕೂಲ ಆಗಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200