ಸಿಗಂದೂರು ಲಾಂಚ್‌, ವಾಹನ ಸಾಗಟ ಸ್ಥಗಿತ, ಸ್ಥಳೀಯರಲ್ಲಿ ಆತಂಕ, ಪ್ರವಾಸಿಗರಿಗು ಸಂಕಷ್ಟ, ಕಾರಣವೇನು?

SHIVAMOGGA LIVE NEWS | 5 JUNE 2024➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SAGARA : ಶರಾವತಿ ಹಿನ್ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ ಜೂ.5ರಿಂದ ಕಳಸವಳ್ಳಿ – ಅಂಬಾರಗೋಡ್ಲು ಲಾಂಚ್‌ನಲ್ಲಿ (Sigandur Launch) ವಾಹನ ಸಾಗಾಟ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.

ಲಾಂಚ್‌ನಲ್ಲಿ ವಾಹನ ಸಾಗಾಟ ಸ್ಥಗಿತಗೊಳಿಸಿರುವುದರಿಂದ ಕರೂರು ಹೋಬಳಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಆರಂಭವಾಗಿ ನೀರಿನ ಮಟ್ಟ ಏರಿದಲ್ಲಿ ಮಾತ್ರ ಮತ್ತೆ ವಾಹನ ಸಾಗಾಟ ಪುನಾರಂಭವಾಗಲಿದೆ. ಶರಾವತಿ ನದಿಯ ಹಿನ್ನೀರು ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಹಸಿರುಮಕ್ಕಿ – ಮುಪ್ಪಾನೆ ಲಾಂಚ್‌ ಸೇವೆ ನಿಲ್ಲಿಸಲಾಗಿದೆ.

ಇದನ್ನೂ ಓದಿ – ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?

ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಸಿಗಂದೂರು ಲಾಂಚ್‌ ಸೇವೆ ಸ್ಥಗಿತವಾಗಿತ್ತು. ಇದರಿಂದ ಜನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿತ್ತು. ಈ ಬಾರಿ ಉತ್ತಮ ಮಳೆಯಾದರೆ ಲಾಂಚ್‌ ಸೇವೆಗೆ ಅನುಕೂಲ ಆಗಲಿದೆ.

Leave a Comment