SHIVAMOGGA LIVE | 13 JUNE 2023
TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಸಿಗಂದೂರು ಲಾಂಚ್ನಲ್ಲಿ (Sigandur Launch) ವಾಹನ ಸಾಗಣೆ ನಿರ್ಬಂಧಿಸಲಾಗಿದೆ. ಜೂ.14ರಿಂದ ಲಾಂಚ್ನಲ್ಲಿ ಬಸ್, ಕಾರು ಸೇರಿದಂತೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ.
ಅಂಬರಗೋಡ್ಲು – ಕಳಸವಳ್ಳಿಯ ಎರಡು ಬದಿಯಲ್ಲಿ ಪ್ಲಾಟ್ ಫಾರಂ ಮುಗಿದಿದೆ. ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್ ಸಿಕ್ಕಿ ಬೀಳಲಿದೆ. ಆದ್ದರಿಂದ ಜನರನ್ನು ಮಾತ್ರ ಲಾಂಚ್ಗೆ ಹತ್ತಿಸಲು ನಿರ್ಧರಿಸಲಾಗಿದೆ ಎಂದು ಕಡವು ಅಧಿಕಾರಿಗಳು ತಿಳಿಸಿದ್ದಾರೆ.
![]() |
ಜೂ.14ರಿಂದ ಸ್ಥಳೀಯರು ಮತ್ತು ಪ್ರವಾಸಿಗರನ್ನು ಮಾತ್ರ ಲಾಂಚ್ನಲ್ಲಿ ಕರೆದೊಯ್ಯಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ – ಸಿಗಂದೂರು ಲಾಂಚ್, ಇನ್ನೊಂದು ವಾರದಲ್ಲಿ ಸ್ಥಗಿತ ಸಾಧ್ಯತೆ, ಕಾರಣವೇನು?
ಶರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮುಂಗಾರು ಆರಂಭವಾಗಿ, ಚುರುಕುಗೊಳ್ಳದೆ ಇದ್ದರೆ ಲಾಂಚ್ ಸೇವೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಮುಂದೆ ಸ್ಥಳೀಯರ ಸಂಚಾರಕ್ಕೆ ಅನುಕೂಲವಾಗಲಿ ಎಂದು ಸಣ್ಣ ಲಾಂಚ್ ಮತ್ತು ಬೋಟ್ ಬಳಸಲು ಯೋಜಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200