ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್‌ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ

SAGARA, 6 AUGUST 2024 : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಬಸ್‌ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಘಟನೆ ಸಂಭವಿಸಿದೆ. ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದು, ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗೆಳಿದಿದ್ದಾರೆ.

vayuvya-sarige-bus-burnt-at-sagara-on-jog-road

ಬಸ್‌ನ ಬಹು ಭಾಗ ಹೊತ್ತಿ ಉರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ ⇓

ಒಂಟಿ ಮಹಿಳೆ ಕೊಲೆ ಕೇಸ್‌, ಸಂಬಂಧಿ ಅರೆಸ್ಟ್‌, ಹತ್ಯೆಗೆ ಕಾರಣವೇನು?

vayuvya-sarige-bus-burnt-at-sagara-on-jog-road

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment