ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 2 ಆಗಸ್ಟ್ 2021
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಶರಾವತಿಗೆ ನದಿಗೆ ಬಾಗಿನ ಅರ್ಪಿಸಿ, ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರು ಹೊರಗೆ ಬಿಡಲಾಯಿತು.
ಇವತ್ತು ಬೆಳಗ್ಗೆ ಕೆಪಿಸಿ ಅಧಿಕಾರಿಗಳು ಶರಾವತಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನ ಅರ್ಪಣೆ ಮಾಡಿದರು. ಕೆಪಿಸಿ ಅಧಿಕಾರಿಗಳು, ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಗೇಟ್ ನಿಂದ ನೀರು ಹೊರಗೆ
ಲಿಂಗನಮಕ್ಕಿ ಜಲಾಶಯದ ಗೇಟ್ನಿಂದ ಇವತ್ತು ಸಾಂಪ್ರದಾಯಿಕವಾಗಿ ಕೆಲವು ನಿಮಿಷ ನೀರು ಹೊರಗೆ ಬಿಡಲಾಯಿತು. ಜಲಾಶಯ ಅರ್ಧ ಭರ್ತಿಯಾದ ಬಳಿಕ ಒಂದು ಗೇಟ್ ಮೂಲಕ ಸ್ವಲ್ಪ ಪ್ರಮಾಣದ ನೀರನ್ನು ಹೊಳಗೆ ಹರಿಸಲಾಗುತ್ತದೆ.
ಜಲಾಶಯದಲ್ಲಿ 1795 ಅಡಿ ನೀರು ಸಂಗ್ರಹವಾದರೆ, ಅರ್ಧ ಭರ್ತಿಯಾದಂತಾಗಲಿದೆ. ಇಷ್ಟು ನೀರು ಸಂಗ್ರಹವಾದರೆ ಗೇಟ್ ಮಟ್ಟಕ್ಕೆ ನೀರು ಬರುತ್ತದೆ. ಆ ಸಂದರ್ಭದಲ್ಲಿ ಬಾಗಿನ ಅರ್ಪಿಸಿ ಗೇಟ್ನಿಂದ ಸ್ವಲ್ಪ ಪ್ರಮಾಣದ ನೀರು ಹೊರಗೆ ಹರಿಸಲಾಗುತ್ತದೆ.

ಇವತ್ತು ಎಷ್ಟಿದೆ ನೀರು?
ಶರಾವತಿ ನದಿ ಭಾಗದಲ್ಲಿ ಕಳೆದ ತಿಂಗಳು ಭಾರಿ ಮಳೆಯಾಗಿದೆ. ಈ ಹಿನ್ನಲೆಯಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬಂದಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟ ಬಹುಬೇಗ ಏರಿಕೆಯಾಗಿದೆ. 1819 ಅಡಿ ಗರಿಷ್ಠ ಮಟ್ಟ ಹೊಂದಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಇವತ್ತು 1807.20 ಅಡಿಯಷ್ಟು ನೀರಿನ ಸಂಗ್ರಹವಿದೆ. 14481 ಕ್ಯೂಸೆಕ್ ಒಳಹರಿವು ಇದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಭಾಗದಲ್ಲಿ 3.40 ಮಿ.ಮೀ ಮಳೆಯಾಗಿದೆ. ಇದರಿಂದ ಜಲಾಶಯದ ಒಳ ಹರಿವು ಇನ್ನಷ್ಟು ಹೆಚ್ಚಳವಾಗುವ ಸಂಭವವಿದೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






