NEWS HIGHLIGHTS
ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ.

ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಬೆಳೆ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
