ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ.
ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಬೆಳೆ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200