ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಸಾಗರ ತಾಲೂಕು ತಾಳಗುಪ್ಪ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಹಸಿರು ಶಾಲು, ಪ್ಲೇ ಕಾರ್ಡ್ ಹಿಡಿದು, ಅರ್ಧ ದಿನ ರಸ್ತೆಯಲ್ಲೇ ನಿಂತು ಜನ ಜಾಗೃತಿ ಮೂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಯಾರಿದು ಮಹಿಳೆ?
ತಾಳಗುಪ್ಪದ ನವಿಲುಮನೆ ಗ್ರಾಮದ ಪೂರ್ಣಿಮಾ ಎಂಬುವವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಶನಿವಾರ ಮಧ್ಯಾಹ್ನದಿಂದ ಸಂಜೆವರೆಗೆ ಪ್ಲೇ ಕಾರ್ಡ್ ಹಿಡಿದು ನಿಂತು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಕಾರಣವೇನು?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮಸೂದೆ, ಸಾರ್ವಜನಿಕ ಸ್ವತ್ತುಗಳನ್ನು ಬಂಡವಾಳಶಾಹಿಗಳ ಕೈಗೆ ಒಪ್ಪಿಸುತ್ತಿರುವುದನ್ನು ವಿರೋಧಿಸಿ, ಪಂಜಾಬ್, ಹರಿಯಾಣದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪೂರ್ಣಿಮಾ ಅವರು ಪ್ರತಿಭಟನೆ ನಡೆಸಿದರು. ಪ್ರತಿ ವಾರ ತಾಳಗುಪ್ಪ ಸಂತೆಯಲ್ಲಿ ಹೀಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುವುದಾಗಿ ಪೂರ್ಣಿಮಾ ತಿಳಿಸಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಖಂಡಿಸಿ ಪೂರ್ಣಿಮಾ ಅವರು ತಾಳಗುಪ್ಪದಿಂದ ಸಾಗರದವರೆಗೆ ಪಾದಯಾತ್ರೆ ಮಾಡಿ, ಮನವಿ ಸಲ್ಲಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200